ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ನೆಟ್ಟ ಇಸ್ಲಾಂ ಧ್ವಜ ತೆರವು ಮಾಡಿದ ಪೊಲೀಸರು, ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Oct 05, 2023 | 9:56 PM

ಅನುಮತಿ ಪಡೆಯದೆ ಹಾಕಿರುವ ಧ್ವಜ ಇದಾಗಿದ್ದು, ಈ ಬಗ್ಗೆ ಪೊಲೀಸರ ಗಮನಕ್ಕೆ ತರದಿರುವುದಕ್ಕೆ ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಪಿಡಿಒ ಕರ್ತವ್ಯದ ಬಗ್ಗೆ ಎಚ್ಚರಿಕೆ ನೀಡಿದ್ದು, ನಿಮ್ಮ ಮೇಲೆ ಕೇಸ್ ಹಾಕೋದಾಗಿ ಎಚ್ಚರಿಸಿದ್ದಾರೆ. ಇನ್ನು ಗ್ರಾಮದಲ್ಲಿ ಅಹಿತಕರ ಘಟನೆಗೆ ಈ ಧ್ವಜ ಕಾರಣವಾಗುತ್ತಿತ್ತು. ಪೊಲೀಸರ ಸಕಾಲಿಕ ಕ್ರಮದಿಂದ ಪ್ರಕರಣ ತಿಳಿಯಾಗಿದೆ.

ಮಂಗಳೂರು, ಅ.05: ಜಿಲ್ಲೆಯ ಮೂಡುಬಿದಿರೆ(Muḍubidire) ತಾಲೂಕಿನ‌ ಪುಚ್ಚೆಮುಗೇರು ಗ್ರಾಮದಲ್ಲಿ ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ಇಸ್ಲಾಂ ಧ್ವಜ(Islam Flag)ನೆಟ್ಟ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೂಡಬಿದಿರೆ ಪೊಲೀಸರು ಧ್ವಜವನ್ನು ತೆರವು ಮಾಡಿದ್ದಾರೆ. ಈ ವೇಳೆ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್​ ಎಂಬುವವರು ಪಂಚಾಯತ್ ಅನುಮತಿ ಪಡೆಯದೆ ಹಾಕಿರುವ ಧ್ವಜ ಇದಾಗಿದ್ದು, ಈ ಬಗ್ಗೆ ಪೊಲೀಸರ ಗಮನಕ್ಕೆ ತರದಿರುವುದಕ್ಕೆ ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಪಿಡಿಒ ಕರ್ತವ್ಯದ ಬಗ್ಗೆ ಎಚ್ಚರಿಕೆ ನೀಡಿದ್ದು, ನಿಮ್ಮ ಮೇಲೆ ಕೇಸ್ ಹಾಕೋದಾಗಿ ಎಚ್ಚರಿಸಿದ್ದಾರೆ. ಇನ್ನು ಗ್ರಾಮದಲ್ಲಿ ಅಹಿತಕರ ಘಟನೆಗೆ ಈ ಧ್ವಜ ಕಾರಣವಾಗುತ್ತಿತ್ತು. ಪೊಲೀಸರ ಸಕಾಲಿಕ ಕ್ರಮದಿಂದ ಪ್ರಕರಣ ತಿಳಿಯಾಗಿದೆ. ಇನ್ನು ಧ್ವಜ ನೆಟ್ಟವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Oct 05, 2023 09:44 PM
Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More