ಹಿಂದೆ ನೀವು ಹೇಳಿದ್ದನ್ನೇ ಈಗ ನಾನು ಹೇಳಿದ್ದೇನೆ ಎಂದು ಜ್ಞಾನೇಂದ್ರಗೆ ಹೇಳಿದ ಶಿವಕುಮಾರ್!

ಶಿವಕುಮಾರ್ ಹೇಳಿದ್ದಕ್ಕೆ ಜ್ಞಾನೇಂದ್ರ ಉತ್ರ ಕೊಡುತ್ತಾರೆ ಅದು ಬೇರೆ ವಿಚಾರ. ಅದರೆ ಸದನದಲ್ಲಿ ಅಗುತ್ತಿರುವ ಚರ್ಚೆಗಳ ಗುಣಮಟ್ಟ ಕಳವಳಕಾರಿಯಾಗಿದೆ. ನೀವು ಹೇಳಿದ್ದಕ್ಕೆ ನಾನು ಹೇಳಿದ್ದು, ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಅಂತೆಲ್ಲ ಚರ್ಚೆ ನಡೆಯುವುದಾದರೆ ಚರ್ಚೆಯ ಅಗತ್ಯವಿಲ್ಲ ಎನಿಸುತ್ತದೆ. ಜನ ಕೂಡ ಅರ್ಥ ಮಾಡಿಕೊಂಡು ಬಿಡುತ್ತಾರೆ. ಓಹೋ, ಹಿಂದೆ ಅವರು ಮಾಡಿದ್ದನ್ನೇ ಇವರು ಈಗ ಮಾಡುತ್ತಿದ್ದಾರೆ!

ಹಿಂದೆ ನೀವು ಹೇಳಿದ್ದನ್ನೇ ಈಗ ನಾನು ಹೇಳಿದ್ದೇನೆ ಎಂದು ಜ್ಞಾನೇಂದ್ರಗೆ ಹೇಳಿದ ಶಿವಕುಮಾರ್!
|

Updated on: Jul 16, 2024 | 8:19 PM

ಬೆಂಗಳೂರು: ಸದನದಲ್ಲಿ ಇಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಎಸ್ಐಟಿ ತನಿಖೆಗೆ ಸಂಬಂಧಿಸಿದಂತೆ ವಾಗ್ವಾದ ನಡೆಯಿತು. ಎಸ್ಐಟಿ ತನಿಖೆ ನಡೆಯುತ್ತಿರುವಾಗಲೇ ಆರೋಪಿಗಳು ನಿರ್ದೋಷಿಗಳು ಅಂತ ಹೇಳಿದರೆ ಅದು ತನಿಖಾಧಿಕಾರಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ತನಿಖೆಯ ದಿಕ್ಕು ತಪ್ಪುತ್ತದೆ ಎಂದು ಹೇಳಿ ಜ್ಞಾನೇಂದ್ರ ಮಾತು ಮುಂದುವರಿಸುತ್ತಿದ್ದಾಗ ಎದ್ದು ನಿಂತು ಅವರ ಮಾತನ್ನು ತುಂಡರಿಸುವ ಶಿವಕುಮಾರ್, ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಇಬ್ಬರು ಸಚಿವರ ಮೇಲೆ ಆರೋಪಗಳು ಬಂದಿದ್ದವು, ಆಗ ವಿರೋಧ ಪಕ್ಷದಲ್ಲಿದ್ದ ನಾವು ವಿಧಾನಸೌಧದಲ್ಲೇ ಮಲಗಿ ಪ್ರತಿಭಟನೆ ನಡೆಸಿದ್ದೆವು, ಆಗ ತನಿಖೆ ಇನ್ನೂ ಪ್ರಾರಂಭ ಕೂಡ ಆಗಿರಲಿಲ್ಲ, ಅದರೆ ಗೃಹ ಸಚಿವರಾಗಿದ್ದ ನೀವು ಅರೋಪಿತ ಸಚಿವರು ನಿರ್ದೋಷಿಗಳಾಗಿ ಹೊರ ಬರುತ್ತಾರೆ ಅಂತ ಹೇಳಿದ್ರಿ. ನಿಮ್ಮ ಹಾಗೆಯೇ ನಾನು ಕೂಡ ನಮ್ಮ ಮಂತ್ರಿ, ಶಾಸಕ ನಿರ್ದೋಷಿಗಳಾಗಿ ಹೊರ ಬರುತ್ತಾರೆ ಅಂತ ಹೇಳುತ್ತಿದ್ದೇನೆ ಅನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರು ನಿರ್ವಹಣೆಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ಜು.27 ಕ್ಕೆ ಜನಪ್ರತಿನಿಧಿಗಳ ಸಭೆ: ಡಿಕೆ ಶಿವಕುಮಾರ್

Follow us
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ತಮ್ಮ ಕೋಪಕ್ಕೆ ಮಾಧ್ಯಮದವರು ಕ್ಯಾರೆ ಅನ್ನದಾಗ ಪರಮೇಶ್ವರ್ ಮೆತ್ತಗಾದರು!
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಬಾಗಲಕೋಟೆ: ಮೃತ ಮಹಾದೇವಿ ಪೋಷಕರಿಗೆ ಮಹಿಳಾ ಆಯೋಗದ ಅಧ್ಯಕ್ಷೆಯಿಂದ ಸಾಂತ್ವನ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
ಮಂತ್ರಾಲಯದ ರಾಯರ ಮಠದಲ್ಲಿ 350 ಕಲಾವಿದರಿಂದ ರಾಮಾಯಣಂ ಗೀತಗೆ ನೃತ್ಯ, ದಾಖಲೆ
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್
VIDEO: ಸಿಟ್ಟಿನಿಂದ ರಿಝ್ವಾನ್​ನತ್ತ ಚೆಂಡೆಸೆದ ಶಕೀಬ್ ಅಲ್ ಹಸನ್
ವಿಐಪಿ ಖೈದಿಗಳಿಗೆ ‘ಸೇವೆ’ ಒದಗಿಸುವ ಪದ್ಧತಿ ಬಹಳ ವರ್ಷಗಳಿಂದ ನಡೆಯುತ್ತಿದೆ!
ವಿಐಪಿ ಖೈದಿಗಳಿಗೆ ‘ಸೇವೆ’ ಒದಗಿಸುವ ಪದ್ಧತಿ ಬಹಳ ವರ್ಷಗಳಿಂದ ನಡೆಯುತ್ತಿದೆ!
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಫುಲ್ ಜೋಶ್... 20 ವರ್ಷದ ಯುವ ಎಡಗೈ ವೇಗಿಯನ್ನು ಪರಿಚಯಿಸಿದ ಇಂಗ್ಲೆಂಡ್
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ
ಇಸ್ಕಾನ್​ನಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮ, ಭಕ್ತಿಯಲ್ಲಿ ಮೈ ಮರೆತ ಜನ
‘ಸೆಂಟ್ರಲ್ ಜೈಲ್​ ಈಗ ರೆಸಾರ್ಟ್​’; ದರ್ಶನ್ ಫೋಟೋ ನೋಡಿ ಟೀಕೆ
‘ಸೆಂಟ್ರಲ್ ಜೈಲ್​ ಈಗ ರೆಸಾರ್ಟ್​’; ದರ್ಶನ್ ಫೋಟೋ ನೋಡಿ ಟೀಕೆ
Daily Devotional: ಶ್ರೀಕೃಷ್ಣ ಜನ್ಮಾಷ್ಟಮಿಯ ವಿಶೇಷ ಹಾಗೂ ಮಹತ್ವ ತಿಳಿಯಿರಿ
Daily Devotional: ಶ್ರೀಕೃಷ್ಣ ಜನ್ಮಾಷ್ಟಮಿಯ ವಿಶೇಷ ಹಾಗೂ ಮಹತ್ವ ತಿಳಿಯಿರಿ
Nithya Bhavishya: ಕೃಷ್ಣ ಜನ್ಮಾಷ್ಟಮಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಕೃಷ್ಣ ಜನ್ಮಾಷ್ಟಮಿ ದಿನದ ರಾಶಿ ಭವಿಷ್ಯ ತಿಳಿಯಿರಿ