PM Modi in Belagavi: ಕನ್ನಡ ನಾಡಿನ ಸಂಸ್ಕೃತಿಯಿಂದ ಪ್ರಭಾವಿತರಾಗಿರುವ ಪ್ರಧಾನಿ ಮೋದಿಯವರನ್ನು ರಂಗೋಲಿ ಕಲೆಯೂ ದಂಗಾಗಿಸಿತು!

ಅರುಣ್​ ಕುಮಾರ್​ ಬೆಳ್ಳಿ

Updated on: Feb 27, 2023 | 6:29 PM

ನಮ್ಮ ಸಂಸ್ಕೃತಿಯ ಒಂದು ಭಾಗವಾಗಿರುವ ರಂಗೋಲಿ ಕೂಡ ಬೆಳಗಾವಿಯಲ್ಲಿ ಇಂದು ಪ್ರಧಾನಿ ಮೋದಿಯವರನ್ನು ಇಂಪ್ರೆಸ್ ಮಾಡಿತು.

ಬೆಳಗಾವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ನಮ್ಮ ನಾಡಿ ಭಾಷೆ, ಸಂಸ್ಕೃತಿ ಮತ್ತು ಶ್ರೀಮಂತ ಪರಂಪರೆಯಿಂದ (heritage) ಪ್ರಭಾವಿತರಾಗಿರುವುದು ಸರ್ವವಿದಿತ, ರಾಜ್ಯಕ್ಕೆ ಭೇಟಿ ನೀಡಿದಾಗೆಲ್ಲ ಅವರು ಕನ್ನಡ ನಾಡಿನ ಸಂಸ್ಕೃತಿಯನ್ನು ಕೊಂಡಾಡುತ್ತಾರೆ, ಭಾಷಣವನ್ನು ಕನ್ನಡದಲ್ಲಿ (Kannada) ಆರಂಭಿಸುತ್ತಾರೆ, ಇಲ್ಲಿಯ ಸಾಹಿತಿ-ವಿದ್ವಾಂಸರನ್ನು ಆದರದಿಂದ ಉಲ್ಲೇಖಿಸುತ್ತಾರೆ. ನಮ್ಮ ಸಂಸ್ಕೃತಿಯ ಒಂದು ಭಾಗವಾಗಿರುವ ರಂಗೋಲಿ (Rangoli) ಕೂಡ ಬೆಳಗಾವಿಯಲ್ಲಿ ಇಂದು ಪ್ರಧಾನಿ ಮೋದಿಯವರನ್ನು ಇಂಪ್ರೆಸ್ ಮಾಡಿತು. ವೇದಿಕೆಯ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ಹಲವಾರು ಯೋಜನೆಗಳನ್ನು ರಂಗೋಲಿಯಲ್ಲಿ ಬಿಡಿಸಿದ್ದನ್ನು ಕಂಡು ಅವರು ಮೂಕವಿಸ್ಮಿತರಾದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.