ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ನೇಮಕ ಮಾಡಿದ ವಕೀಲರೇ ಈಗಲೂ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ: ಡಿಕೆ ಶಿವಕುಮಾರ್

ಹಿಂದಿನ ಸರ್ಕಾರಗಳು ಯಾವ್ಯಾವ ಸಂದರ್ಭದಲ್ಲಿ ನೀರನ್ನು ತಮಿಳುನಾಡುಗೆ ಬಿಟ್ಟಿವೆ ಅಂತ ತಮ್ಮಲ್ಲಿ ದಾಖಲೆಗಳಿವೆ ಎಂದ ಅವರು ಬಿಜೆಪಿ ಸರ್ಕಾರ 10,000 ಕ್ಯೂಸೆಕ್ಸ್ ನೀರು ಬಿಡಲು ಅಫಿಡವಿಟ್ ಮಾಡಿಸಿದ ವರದಿಯ ಪೇಪರ್ ಕಟಿಂಗ್ ತೋರಿಸಿದರು.

ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ನೇಮಕ ಮಾಡಿದ ವಕೀಲರೇ ಈಗಲೂ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ: ಡಿಕೆ ಶಿವಕುಮಾರ್
|

Updated on: Sep 22, 2023 | 5:12 PM

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಧಿಗಳೊಂದಿಗೆ ಮಾತಾಡಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ನಿನ್ನೆ ನಡೆದ ವಿಚಾರಣೆಯಲ್ಲಿ ಸುಪ್ರೀಮ್ ಕೋರ್ಟ್ ಕರ್ನಾಟಕ (Karnataka) ಮತ್ತು ತಮಿಳುನಾಡು (Tamil Nadu) ಎರಡೂ ರಾಜ್ಯಗಳ ಅಪೀಲನ್ನು ತಿರಸ್ಕರಿಸಿ ನಿರ್ವಹಣಾ ಪ್ರಾಧಿಕಾರ ನೀಡಿರುವ (CWMA) ಆದೇಶಕ್ಕೆ ಬದ್ಧರಾಗಿರಿ ಅಂತ ಹೇಳಿದೆ ಎಂದರು. ರಾಜ್ಯ ಸರ್ಕಾರದಿಂದ ನಿಯೋಜಿತ ವಕೀಲರು ಅದ್ಭುತವಾಗಿ ವಾದ ಮಾಡಿದರು ಎಂದು ಹೇಳಿದ ಶಿವಕುಮಾರ್ ವಿರೋಧ ಪಕ್ಷಗಳು ವಾದಮಂಡನೆ ದುರ್ಬಲವಾಗಿತ್ತು ಅಂತ ಆರೋಪ ಮಾಡಿದರೆ ಮಾಡಿಕೊಳ್ಳಲಿ, ಯಾಕೆಂದರೆ ಹಿಂದೆ ಬಿಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಮತ್ತ ಬಸವರಾಜ ಬೊಮ್ಮಾಯಿ ಸರ್ಕಾರಗಳು ಯಾವ ವಕೀಲರನ್ನು ನೇಮಕ ಮಾಡಿದ್ದರೋ ಈಗಲು ಅವರೇ ಮುಂದುವರಿದಿದ್ದಾರೆ ಎಂದು ಶಿವಕುಮಾರ್ ಹೇಳಿದರು. ಹಿಂದಿನ ಸರ್ಕಾರಗಳು ಯಾವ್ಯಾವ ಸಂದರ್ಭದಲ್ಲಿ ನೀರನ್ನು ತಮಿಳುನಾಡುಗೆ ಬಿಟ್ಟಿವೆ ಅಂತ ತಮ್ಮಲ್ಲಿ ದಾಖಲೆಗಳಿವೆ ಎಂದ ಅವರು ಬಿಜೆಪಿ ಸರ್ಕಾರ 10,000 ಕ್ಯೂಸೆಕ್ಸ್ ನೀರು ಬಿಡಲು ಅಫಿಡವಿಟ್ ಮಾಡಿಸಿದ ವರದಿಯ ಪೇಪರ್ ಕಟಿಂಗ್ ತೋರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ