ರೇಣುಕಾ ಸ್ವಾಮಿ ಕರೆದೊಯ್ದ ದೃಶ್ಯ ಟೋಲ್ ಗೇಟ್ ಸಿಸಿಟಿವಿಯಲ್ಲಿ ಸೆರೆ

|

Updated on: Jun 14, 2024 | 4:04 PM

ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾ ಸ್ವಾಮಿ (Renuka swami) ಹತ್ಯೆ ಮಾಡಿದ ಕೇಸ್​, ದಿನಕ್ಕೊಂದು ತಿರುವು ಪಡೆದುಕೊಂಡು ಸಾಗುತ್ತಿದೆ. ಇದೀಗ ಮೃತ ರೇಣುಕಾ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದ ವಿಡಿಯೋ ಗುಯಿಲಾಳು ಟೋಲ್ ಗೇಟ್ ಬಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರವಿ ಇಟಿಎಸ್ ಕಾರಲ್ಲಿ ರೇಣುಕಾಸ್ವಾಮಿ ಕರೆದೊಯ್ಯಲಾಗಿದೆ.

ಚಿತ್ರದುರ್ಗ, ಜೂ.14: ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾ ಸ್ವಾಮಿ (Renuka swami) ಹತ್ಯೆ ಮಾಡಿದ ಕೇಸ್​, ದಿನಕ್ಕೊಂದು ತಿರುವು ಪಡೆದುಕೊಂಡು ಸಾಗುತ್ತಿದೆ. ಇದೀಗ ಮೃತ ರೇಣುಕಾ ಅವರನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದೊಯ್ದ ವಿಡಿಯೋ ಗುಯಿಲಾಳು ಟೋಲ್ ಗೇಟ್ ಬಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರವಿ ಇಟಿಎಸ್ ಕಾರಲ್ಲಿ ರೇಣುಕಾಸ್ವಾಮಿ ಕರೆದೊಯ್ಯಲಾಗಿದೆ. ಇನ್ನು ಈ ಕುರಿತು ನಿನ್ನೆ(ಜೂನ್ 13)ರ ತಡರಾತ್ರಿ ಚಿತ್ರದುರ್ಗದಲ್ಲಿ ಆರೋಪಿ ರಘು ಅವರನ್ನು ಕರೆತಂದು ಮಹಜರು ಮಾಡಲಾಗಿದೆ. ಚಳ್ಳಕೆರೆ ಗೇಟ್ ಬಳಿ ರೇಣುಕಾ ಸ್ವಾಮಿ ಬೈಕ್ ನಿಲ್ಲಿಸಿದ್ದರು. ಆ ಬಳಿಕ ಅವರ ಕಿಡ್ನ್ಯಾಪ್ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸ್ಥಳಮಹಜರು ಮಾಡಲಾಗಿದೆ. ಎಲ್ಲಿ ಅವರನ್ನು ಕಿಡ್ನ್ಯಾಪ್ ಮಾಡಲಾಯಿತು, ಹೇಗೆ ಕರೆದುಕೊಂಡು ಹೋಗಲಾಯಿತು ಎನ್ನುವುದನ್ನು ರಘು ಅವರು ವಿವರಿಸಿದ್ದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on