ಆತಂಕ ಬೇಡ, ಒಮೈಕ್ರಾನ್ ರೂಪಾಂತರಿ ಭಾರತಕ್ಕೆ ಲಗ್ಗೆಯಿಟ್ಟರೆ ಆಕಾಶವೇನೂ ಕಳಚಿ ನಮ್ಮ ಮೇಲೆ ಬೀಳದು: ಡಾ ದೇವಿಪ್ರಸಾದ್​ ಶೆಟ್ಟಿ

ಮೊದಲಿನ ಎರಡು ಅಲೆಗಳು ಲಗ್ಗೆಯಿಟ್ಟಾಗ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರು ಹೆದರುತ್ತಿದ್ದರು ಮತ್ತು ಹಿಂಜರಿಯುತ್ತಿದ್ದರು, ಆದರೆ ಈಗ ಅ ಹೆದರಿಕೆ ಮಾಯವಾಗಿದೆ. ವೈದ್ಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗಿದೆ ಮತ್ತು ಪರಿಸ್ಥಿತಿ ಸರ್ಕಾರದ ನಿಯಂತ್ರಣದಲ್ಲಿರಲಿದೆ ಎಂದು ಡಾ ಶೆಟ್ಟಿ ಹೇಳಿದರು.

ಆತಂಕ ಬೇಡ, ಒಮೈಕ್ರಾನ್ ರೂಪಾಂತರಿ ಭಾರತಕ್ಕೆ ಲಗ್ಗೆಯಿಟ್ಟರೆ ಆಕಾಶವೇನೂ ಕಳಚಿ ನಮ್ಮ ಮೇಲೆ ಬೀಳದು: ಡಾ ದೇವಿಪ್ರಸಾದ್​ ಶೆಟ್ಟಿ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Dec 01, 2021 | 8:45 PM

ಕೋವಿಡ್-19 ಮೂರನೇ ಅಲೆ ಭಾರತದಲ್ಲಿ ಅತಂಕ ಸೃಷ್ಟಿಸಳಲಾರಂಭಿಸಿದೆ. ಲಾಕ್ಡೌನ್ ಮತ್ತೊಮ್ಮೆ ನಮ್ಮ ಬದುಕಿನ ಭಾಗವಾಗಬಹುದು. ಜನರಲ್ಲಿ ಭೀತಿ ಹುಟ್ಟಿದೆ. ವಯಸ್ಕರು ಮನೆಯಿಂದ ಆಚೆ ಬರಲು ಹೆದರುತ್ತಿದ್ದಾರೆ. ಏತನ್ಮಧ್ಯೆ, ಸರ್ಕಾರ ಎಲ್ಲ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ವಿಖ್ಯಾತ ಹೃದ್ರೋಗ ತಜ್ಞ ಡಾ ದೇವಿಪ್ರಸಾದ್​​ ಶೆಟ್ಟಿ ಅವರು ರಾಜ್ಯ ಕೊವಿಡ್ ಟಾಸ್ಕ್ ಫೋರ್ಸ್ ನ ಚೇರ್ಮನ್ ಕೂಡ ಹೌದು. ಅವರಿಗೆ ಕೊವಿಡ್ ಪಿಡುಗಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯಿದೆ ಮತ್ತು ಮೂರನೇ ಅಲೆ ಸೃಷ್ಟಿಸಿರುವ ಆತಂಕ ಮತ್ತು ಒಮೈಕ್ರಾನ್ ಪ್ರಕರಣಗಳು ಭಾರತದಲ್ಲೂ ಪತ್ತೆಯಾದರೆ ಅದನ್ನು ಮಟ್ಟ ಹಾಕಲು ಕರ್ನಾಟಕ ಸಿದ್ಧವಿದೆಯಾ ಮೊದಲಾದ ಪ್ರಶ್ನೆಗಳಿಗೆ ಸಮಂಜಸ ಉತ್ತರ ನೀಡಲು ಡಾ ಶೆಟ್ಟಿ ಅವರಿಗಿಂತ ಹೆಚ್ಚು ಸೂಕ್ತ ವ್ಯಕ್ತಿ ಇನ್ನೊಬ್ಬರಿಲ್ಲ. ಇದೇ ಹಿನ್ನೆಲೆಯಲ್ಲಿ ಟಿವಿ9 ವರದಿಗಾರ ಬುಧವಾರದಂದು ಅವರೊಂದಿಗೆ ಮಾತುಕತೆ ನಡೆಸಿದರು.

ಮೂರನೇ ಅಲೆ ಕರ್ನಾಟಕದಲ್ಲಿ ತಲೆದೋರಿದರೆ ಅದನ್ನು ಎದುರಿಸಲು ರಾಜ್ಯ ಹಿಂದೆಂದಿಗಿಂತಲೂ ಹೆಚ್ಚು ಸಮರ್ಥವಾಗಿ ಸನ್ನದ್ಧವಾಗಿದೆ. ಹಲವಾರು ವೈದ್ಯಕೀಯ ಕಾಲೇಜುಗಳು, ಅಪಾರ ಸಂಖ್ಯೆಯ ವೈದ್ಯರು ಮತ್ತು ನರ್ಸ್ಗಳು ನಮ್ಮಲ್ಲಿರೋದು ನಿಜಕ್ಕೂ ನಮ್ಮ ಸೌಭಾಗ್ಯ ಎಂದು ಡಾ ಶೆಟ್ಟಿ ಹೇಳುತ್ತಾರೆ. ಮೊದಲಿನ ಎರಡು ಅಲೆಗಳು ಲಗ್ಗೆಯಿಟ್ಟಾಗ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರು ಹೆದರುತ್ತಿದ್ದರು ಮತ್ತು ಹಿಂಜರಿಯುತ್ತಿದ್ದರು, ಆದರೆ ಈಗ ಅ ಹೆದರಿಕೆ ಮಾಯವಾಗಿದೆ. ವೈದ್ಯರಲ್ಲಿ ಆತ್ಮವಿಶ್ವಾಸ ಹೆಚ್ಚಾಗಿದೆ ಮತ್ತು ಪರಿಸ್ಥಿತಿ ಸರ್ಕಾರದ ನಿಯಂತ್ರಣದಲ್ಲಿರಲಿದೆ ಎಂದು ಡಾ ಶೆಟ್ಟಿ ಹೇಳಿದರು.

ಕೊರೊನಾ ವೈರಸ್ ಲೇಟೆಸ್ಟ್ ರೂಪಾಂತರಿ ಒಮೈಕ್ರಾನ್ ವೈರಣುವೇ ಭಾರತದಲ್ಲಿ ಮೂರನೇ ಅಲೆಗೆ ನಾಂದಿ ಹಾಡುವ ಸಾಧ್ಯತೆಯಿದೆ ಎಂದು ಡಾ ದೇವಿ ಶೆಟ್ಟಿ ಹೇಳುತ್ತಾರೆ. ಒಮೈಕ್ರಾನ್ ಸೋಂಕಿನ ಪ್ರಕರಣಗಳು 15-20 ದೇಶಗಳಲ್ಲಿ ಪತ್ತೆಯಾಗಿವೆ ಮತ್ತು ಭಾರತ ಆ ದೇಶಗಳಿಗಿಂತ ಭಿನ್ನವಾಗೇನೂ ಇಲ್ಲ. ಭಾರತಕ್ಕೂ ಅದು ಬರುತ್ತದೆ;

ಅದರೆ ಒಮೈಕ್ರಾನ್ ಸೋಂಕು ಮೊದಲಿನ ರೂಪಾಂತರಿಗಳಷ್ಟು ಅಪಾಯಕಾರಿ ಅಲ್ಲ. ಹಾಗಾಗಿ, ಒಮೈಕ್ರಾನ್ ಲಗ್ಗೆಯಿಟ್ಟರೆ ಆಕಾಶವೇನೂ ನಮ್ಮ ಮೇಲೆ ಕಳಚಿ ಬೀಳೋದಿಲ್ಲ, ಜನರು ಭಯಬೀಳುವ ಅಗತ್ಯವಿಲ್ಲ ಅಂತ ಡಾ ದೇವಿ ಶೆಟ್ಟಿ ಹೇಳುತ್ತಾರೆ.

ಇದನ್ನೂ ಓದಿ:    ವಿಡಿಯೋದಲ್ಲಿ ಇರುವ ಶೇ.80ರಷ್ಟು ಭಾಗ ಫೇಕ್: ಎಸ್​ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಆರೋಪದ ಬಗ್ಗೆ ಗೋಪಾಲಕೃಷ್ಣ ಪ್ರತಿಕ್ರಿಯೆ

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ