Daily Devotional: ಶುಭಕಾರ್ಯಗಳಲ್ಲಿ ಗಂಡಸರು ಅಂಗವಸ್ತ್ರ ಯಾಕೆ ಧರಿಸಬೇಕು?

Updated on: Mar 09, 2026 | 6:45 AM

ಇದು ಸೂರ್ಯ ಮತ್ತು ಚಂದ್ರರ ಶಕ್ತಿಯನ್ನು ಜಾಗೃತಗೊಳಿಸಲು ಸಹಾಯ ಮಾಡುತ್ತದೆ. ಕಾರ್ಯಕ್ರಮಗಳಲ್ಲಿ ಅಂಗವಸ್ತ್ರ ಧರಿಸಿ ಕುಳಿತಾಗ ಏಕಾಗ್ರತೆ ಹೆಚ್ಚುತ್ತದೆ, ಶಿಸ್ತು ಮೂಡುತ್ತದೆ, ಮನಸ್ಸು ನಿರ್ಮಲವಾಗಿ ಚಂಚಲತೆ ಕಡಿಮೆಯಾಗುತ್ತದೆ. ದೇವಸ್ಥಾನಗಳಲ್ಲಿ ಅಥವಾ ಮನೆಯಲ್ಲಿ ದೇವರ ಮುಂದೆ ಕುಳಿತಾಗ ಸಾತ್ವಿಕ ಗುಣಗಳು ವೃದ್ಧಿಯಾಗುತ್ತವೆ. ಪೂಜಾ ಸಮಯದಲ್ಲಿ ಸಕಾರಾತ್ಮಕ ಶಕ್ತಿಗಳು ಶರೀರದಲ್ಲಿ ಸೇರಿ ಪೂಜೆಯ ಫಲವನ್ನು ಉತ್ತಮಗೊಳಿಸುತ್ತವೆ. ಬಿಳಿಯ ವಸ್ತ್ರ ಚಂದ್ರನ ಸಂಕೇತವಾದರೆ, ಕೇಸರಿ ವಸ್ತ್ರ ಕುಜನ ಸಂಕೇತವಾಗಿದೆ. ಸಾಮಾನ್ಯವಾಗಿ ಬಿಳಿಯ ವಸ್ತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಅಂಗವಸ್ತ್ರವು ಏಕಾಗ್ರತೆ, ಶಕ್ತಿ ಹಾಗೂ ಭಕ್ತಿಯನ್ನು ತರುತ್ತದೆ ಎಂದು ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

ಬೆಂಗಳೂರು, ಮಾರ್ಚ್​​ 09​​​​​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಶುಭಕಾರ್ಯಗಳಲ್ಲಿ ಗಂಡಸರು ಅಂಗವಸ್ತ್ರ ಯಾಕೆ ಧರಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಶುಭಕಾರ್ಯಗಳಲ್ಲಿ ಪುರುಷರು ಅಂಗವಸ್ತ್ರ ಧರಿಸುವುದರ ಮಹತ್ವವು ಅನಾದಿಕಾಲದಿಂದಲೂ ಆಚರಣೆಯಲ್ಲಿರುವ ಸಂಪ್ರದಾಯವಾಗಿದೆ. ಪೂಜೆ, ಹೋಮ, ಹವನ, ವಿವಾಹ ಹಾಗೂ ಗೃಹಪ್ರವೇಶದಂತಹ ಸಂದರ್ಭಗಳಲ್ಲಿ ಪುರುಷರು ಭುಜದ ಮೇಲೆ ಅಂಗವಸ್ತ್ರವನ್ನು ಧರಿಸುತ್ತಾರೆ. ಈ ವಸ್ತ್ರವು ಕೇಸರಿ ಅಥವಾ ಬಿಳಿ ಬಣ್ಣದ್ದಾಗಿರಬಹುದು. ಅಂಗವಸ್ತ್ರ ಧರಿಸುವುದು ಕೇವಲ ಸಂಪ್ರದಾಯವಲ್ಲ, ಬದಲಿಗೆ ಸಂಕಲ್ಪ, ವ್ರತ ಹಾಗೂ ಗುರಿಯ ಸಂಕೇತವಾಗಿದೆ.

ಇದು ಸೂರ್ಯ ಮತ್ತು ಚಂದ್ರರ ಶಕ್ತಿಯನ್ನು ಜಾಗೃತಗೊಳಿಸಲು ಸಹಾಯ ಮಾಡುತ್ತದೆ. ಕಾರ್ಯಕ್ರಮಗಳಲ್ಲಿ ಅಂಗವಸ್ತ್ರ ಧರಿಸಿ ಕುಳಿತಾಗ ಏಕಾಗ್ರತೆ ಹೆಚ್ಚುತ್ತದೆ, ಶಿಸ್ತು ಮೂಡುತ್ತದೆ, ಮನಸ್ಸು ನಿರ್ಮಲವಾಗಿ ಚಂಚಲತೆ ಕಡಿಮೆಯಾಗುತ್ತದೆ. ದೇವಸ್ಥಾನಗಳಲ್ಲಿ ಅಥವಾ ಮನೆಯಲ್ಲಿ ದೇವರ ಮುಂದೆ ಕುಳಿತಾಗ ಸಾತ್ವಿಕ ಗುಣಗಳು ವೃದ್ಧಿಯಾಗುತ್ತವೆ. ಪೂಜಾ ಸಮಯದಲ್ಲಿ ಸಕಾರಾತ್ಮಕ ಶಕ್ತಿಗಳು ಶರೀರದಲ್ಲಿ ಸೇರಿ ಪೂಜೆಯ ಫಲವನ್ನು ಉತ್ತಮಗೊಳಿಸುತ್ತವೆ. ಬಿಳಿಯ ವಸ್ತ್ರ ಚಂದ್ರನ ಸಂಕೇತವಾದರೆ, ಕೇಸರಿ ವಸ್ತ್ರ ಕುಜನ ಸಂಕೇತವಾಗಿದೆ. ಸಾಮಾನ್ಯವಾಗಿ ಬಿಳಿಯ ವಸ್ತ್ರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತದೆ. ಅಂಗವಸ್ತ್ರವು ಏಕಾಗ್ರತೆ, ಶಕ್ತಿ ಹಾಗೂ ಭಕ್ತಿಯನ್ನು ತರುತ್ತದೆ ಎಂದು ಎಂದು ಡಾ.ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

 

Follow Us