AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘Express’way woes: ಲೋಕಾರ್ಪಣೆಯಾದ ಕೇವಲ 6 ದಿನಕ್ಕೆ ಮತ್ತು ವರ್ಷದ ಮೊದಲ ಮಳೆಗೆ ಕೆರೆಯಾಗಿ ಮಾರ್ಪಟ್ಟ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ!

‘Express’way woes: ಲೋಕಾರ್ಪಣೆಯಾದ ಕೇವಲ 6 ದಿನಕ್ಕೆ ಮತ್ತು ವರ್ಷದ ಮೊದಲ ಮಳೆಗೆ ಕೆರೆಯಾಗಿ ಮಾರ್ಪಟ್ಟ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 18, 2023 | 10:25 AM

Share

ರಾಮನಗರ ತಾಲ್ಲೂಕಿನ ಸಂಗಬಸವನದೊಡ್ಡಿಯ ಬಳಿ ಹೆದ್ದಾರಿಯು ಜಲಾವೃತಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವರ್ಷದ ಮೊದಲ (ಕಡು ಬೇಸಿಗೆಯ) ಮಳೆಗೆ ಈ ಪರಿಸ್ಥಿತಿಯಾದರೆ, ಮಳೆಗಾಲದಲ್ಲಿ ಏನಾಗಬೇಡ!

ರಾಮನಗರ: ವಿಡಿಯೋನಲ್ಲಿ ನಿಮಗೆ ಕಾಣುತ್ತಿರೋದು ಬೆಂಗಳೂರಿನ ರಸ್ತೆ ಅಲ್ಲ ಮಾರಾಯ್ರೇ. ಮಾರ್ಚ್ 12ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಉದ್ಘಾಟಿಸಿದ, ಅದಕ್ಕೂ ಮೊದಲು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ವೈಮಾನಿಕ ಸಮೀಕ್ಷೆ ನಡೆಸಿ ರಸ್ತೆ ಕಾಮಗಾರಿಯನ್ನು ಭೇಷ್ ಎಂದು ಪ್ರಶಂಸಿದ, ಸಂಸದ ಪ್ರತಾಪ್ ಸಿಂಹ ಮತ್ತು ಇತರ ಬಿಜೆಪಿ ನಾಯಕರು ಅತ್ಯುತ್ತುಮ ಗುಣಮ್ಟದ, ವಿಶ್ವದರ್ಜೆಯ ಕಾಮಗಾರಿ ಅಂತ ಪ್ರತಿದಿನ ಸರ್ಟಿಫೀಕೇಟ್ ನೀಡಿದ ಮತ್ತು ಟೋಲ್ ಸಂಗ್ರಹಿಸುವ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿದಿನ ವಾಹನ ಸವಾರರು ಜಗಳ ಮಾಡುತ್ತಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ (Bengaluru-Mysuru Expressway). ರಾಮನಗರ ತಾಲ್ಲೂಕಿನ ಸಂಗಬಸವನದೊಡ್ಡಿಯ ಬಳಿ ಹೆದ್ದಾರಿಯು ಜಲಾವೃತಗೊಂಡು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವರ್ಷದ ಮೊದಲ (ಕಡು ಬೇಸಿಗೆಯ) ಮಳೆಗೆ ಈ ಪರಿಸ್ಥಿತಿಯಾದರೆ, ಮಳೆಗಾಲದಲ್ಲಿ ಹೆಂಗೆ ಸ್ವಾಮಿ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.