AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರು ಹಿಂದೆ ಓಡೋಡಿ ಬಂದ ಮಹಿಳೆ: ನಿಲ್ಲಿಸದ ಸಂಸದ ಡಿಕೆ ಸುರೇಶ್​

Video: ಕಾರು ಹಿಂದೆ ಓಡೋಡಿ ಬಂದ ಮಹಿಳೆ: ನಿಲ್ಲಿಸದ ಸಂಸದ ಡಿಕೆ ಸುರೇಶ್​

ರಾಮು, ಆನೇಕಲ್​
| Edited By: |

Updated on:Aug 12, 2023 | 11:01 PM

Share

ಸರ್ಕಾರಿ ಜಮೀನಿನಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದ ರೈತರಿಗೆ ಸಾಗುವಳಿ ಪತ್ರ ವಿತರಣಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರು ಹತ್ತಲು ಬಿಡದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್​ರನ್ನು ಅಡ್ಡಗಟ್ಟಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ.

ಆನೇಕಲ್, ಆಗಸ್ಟ್​ 12: ಸರ್ಕಾರಿ ಜಮೀನಿನಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದ ರೈತರಿಗೆ ಸಾಗುವಳಿ ಪತ್ರ ವಿತರಣಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರು ಹತ್ತಲು ಬಿಡದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ (DK Suresh) ​ರನ್ನು ಅಡ್ಡಗಟ್ಟಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ಸಾಗುವಳಿ ಹಕ್ಕುಪತ್ರ ಸಿಗದ ಕುಟುಂಬಗಳಿಂದ ಮುತ್ತಿಗೆ ಹಾಕಲಾಗಿದೆ. ಈ ವೇಳೆ ಓರ್ವ ಮಹಿಳೆ ಡಿ.ಕೆ ಸುರೇಶ್​ ಅವರ ಕಾರು ಹಿಂದೆ ಓಡೋಡಿ ಬಂದ್ದರೂ ನಿಲ್ಲಿಸದೇ ಹಾಗೆಯೇ ತೆರಳಿದ್ದಾರೆ. ಹಲವು ವರ್ಷಗಳಿಂದ ಜಮೀನು ಉಳುಮೆ ಮಾಡುತ್ತಿದ್ದ 150 ಕುಟುಂಬಗಳ ಪೈಕಿ 114 ಕುಟುಂಬಗಳಿಗೆ ಸಾಗುವಳಿ ಚೀಟಿ ವಿತರಣೆ ಮಾಡಲಾಗಿದೆ. ಸಾಗುವಳಿ ಚೀಟಿ ಸಿಗದ 36 ಕುಟುಂಬಗಳಿಂದ ಡಿ.ಕೆ.ಸುರೇಶ್​ಗೆ ಮುತ್ತಿಗೆ ಹಾಕಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Aug 12, 2023 11:00 PM
Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More