Satish Jarkiholi; ಇನ್ನೂ ಸಾಕಷ್ಟು ಜನ ಸಚಿವಾಕಾಂಕ್ಷಿಗಳಿದ್ದಾರೆ ಮತ್ತು ಅವರೆಲ್ಲ ಸಮರ್ಥರೂ ಆಗಿದ್ದಾರೆ: ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: May 20, 2023 | 12:59 PM

ಇದು ಮೊದಲ ಹಂತದ ಸಂಪುಟ ರಚನೆಯಾಗಿದೆ, ಮುಂದೆ ಎರಡು ಮತ್ತು ಮೂರನೇ ಹಂತದ ಸಂಪುಟ ವಿಸ್ತರಣೆಯಾಗಲಿದೆ ಎಂದು ಸತೀಶ್ ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಮತ್ತು ಉಪ-ಮುಖ್ಯಮಂತ್ರಿ ಜೊತೆ ಇಂದು ಪ್ರಮಾಣವಚನ ಸ್ವೀಕರಿಸಿದ 8 ಸಚಿವ ಸಂಪುಟ ದರ್ಜೆ ಸಚಿವರಲ್ಲಿ, ಯಮಕರನಮರಡಿಯಿಂದ ವಿಧಾನ ಸಭೆಗೆ ಆಯ್ಕೆಯಾಗಿರುವ ಸತೀಶ್ ಜಾರಕಿಹೊಳಿ (Satish Jarkiholi) ಕೂಡ ಸೇರಿದ್ದಾರೆ. ನಗರದಲ್ಲಿಂದು ಟಿವಿ9 ಕನ್ನಡ ವಾಹಿನಿ ವರರಿಗಾರನೊಂದಿಗೆ ಮಾತಾಡಿದ ಸತೀಶ್ ಜಾರಕಿಗೊಳಿ ಹಿರಿತನದ (seniority) ಆಧಾರದಲ್ಲಿ ತಮಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಹೇಳಿದರು. ಇದು ಮೊದಲ ಹಂತದ (first phase) ಸಂಪುಟ ರಚನೆಯಾಗಿದೆ, ಮುಂದೆ ಎರಡು ಮತ್ತು ಮೂರನೇ ಹಂತದ ಸಂಪುಟ ವಿಸ್ತರಣೆಯಾಗಲಿದೆ. ಇನ್ನೂ ಬಹಳಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ ಮತ್ತು ಅವರೆಲ್ಲ ಸಮರ್ಥರೂ ಅಗಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.