‘ಚಿತ್ರರಂಗದಲ್ಲಿ ಸ್ಟಾರ್​ ಯಾರೂ ಇಲ್ಲ’: ನೇರವಾಗಿ ಹೇಳಿದ ನಟ ಧ್ರುವ ಸರ್ಜಾ

ಬಹುನಿರೀಕ್ಷಿತ ‘ಕೆಡಿ’ ಸಿನಿಮಾದ ಸುದ್ದಿಗೋಷ್ಠಿ ಮಾಡಲಾಗಿದೆ. ಧ್ರುವ ಸರ್ಜಾ ನಟನೆಯ ಈ ಸಿನಿಮಾಗೆ ಪ್ರೇಮ್​ ನಿರ್ದೇಶನ ಮಾಡಿದ್ದು, ‘ಕೆವಿಎನ್​ ಪ್ರೊಡಕ್ಷನ್ಸ್​’ ಮೂಲಕ ನಿರ್ಮಾಣ ಆಗುತ್ತಿದೆ. ಈ ಚಿತ್ರದ ಪ್ರೆಸ್​ಮೀಟ್​ನಲ್ಲಿ ಕೇಳಲಾದ ಪ್ರಶ್ನೆಗೆ ‘ಆ್ಯಕ್ಷನ್​ ಪ್ರಿನ್ಸ್​’ ಧ್ರುವ ಸರ್ಜಾ ಅವರು ನೇರವಾಗಿ ಉತ್ತರ ನೀಡಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ..

‘ಚಿತ್ರರಂಗದಲ್ಲಿ ಸ್ಟಾರ್​ ಯಾರೂ ಇಲ್ಲ’: ನೇರವಾಗಿ ಹೇಳಿದ ನಟ ಧ್ರುವ ಸರ್ಜಾ
|

Updated on: May 26, 2024 | 6:53 PM

ಸ್ಟಾರ್ ನಟರ ಸಿನಿಮಾಗಳ (Kannada Cinema) ಸಂಖ್ಯೆ ಕಡಿಮೆ ಆಗಿರುವ ಕಾರಣದಿಂದ ಏಕಪರದೆ ಚಿತ್ರಮಂದಿರಗಳು ಮುಚ್ಚುತ್ತಿವೆ ಎಂದು ಅನೇಕರು ಆರೋಪಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ (Kannada Film Industry) ಸ್ಟಾರ್​ ಹೀರೋಗಳ ಸಿನಿಮಾಗಳು ಇತ್ತೀಚಿನ ವಾರಗಳಲ್ಲಿ ರಿಲೀಸ್​ ಆಗಿರುವುದು ಕಡಿಮೆ. ಈ ಬಗ್ಗೆ ‘ಕೆಡಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಧ್ರುವ ಸರ್ಜಾ (Dhruva Sarja) ಅವರಿಗೆ ಪ್ರಶ್ನೆ ಎದುರಾಗಿದೆ. ಅದಕ್ಕೆ ಅವರು ಈ ರೀತಿ ಉತ್ತರ ನೀಡಿದ್ದಾರೆ. ‘ಚಿತ್ರರಂಗದಲ್ಲಿ ಸ್ಟಾರ್​ ಅಂತ ಯಾರೂ ಇಲ್ಲ. ಒಳ್ಳೆಯ ಸಬ್ಜೆಕ್ಟ್​ಗಳೇ ಸ್ಟಾರ್​. ಜನವರಿಯಿಂದ ಇಲ್ಲಿಯ ತನಕ ಸುಮಾರು 75ಕ್ಕೂ ಅಧಿಕ ಸಿನಿಮಾಗಳು ರಿಲೀಸ್​ ಆಗಿವೆ. ಆ ಸ್ಟಾರ್​ ಮಾಡ್ತಾರೆ, ಈ ಸ್ಟಾರ್​ ಮಾಡ್ತಾರೆ ಅನ್ನೋದಲ್ಲ. ಸಿನಿಮಾ ಚೆನ್ನಾಗಿದ್ದರೆ ಅವರೇ ಸ್ಟಾರ್​. ಕ್ವಾಲಿಟಿ ನೀಡಬೇಕು ಎಂಬ ಕಾರಣಕ್ಕಾಗಿ ನಾವು ಸಮಯ ತೆಗೆದುಕೊಳ್ಳುತ್ತಿದ್ದೇವೆ. ಆ ರೀತಿ ಸ್ಪರ್ಧೆ ಇದೆ. ಏನೇನೋ ಮಾಡಿದರೆ ‘ನನ್ಮಗ ಕಿತ್ತೋದ್ ಸಿನಿಮಾ ಮಾಡಿದಾನೆ’ ಅಂತ ನೀವೇ ಹೇಳುತ್ತೀರಿ. ಪ್ಯಾನ್​ ಇಂಡಿಯಾ ಸಿನಿಮಾ ಎಂದಾಗ ಯೂನಿವರ್ಸಲ್​ ಆಗಿರಬೇಕು. ನಮಗಾಗಿ ಮಾತ್ರ ಮಾಡಿದಾಗ ಅದು ಬೇರೆ. ನೀವು ಹೇಳುವುದರಲ್ಲೂ ಒಂದು ಅರ್ಥ ಇದೆ. ಜಾಸ್ತಿ ಸಿನಿಮಾ ಮಾಡಬೇಕು. ಅದನ್ನು ನಾವು ಖಂಡಿತವಾಗಿ ಮಾಡುತ್ತೇವೆ’ ಎಂದಿದ್ದಾರೆ ಧ್ರುವ ಸರ್ಜಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ