Hosuru: ಸ್ಥಳೀಯರ ಚಾಣಕ್ಷತನದಿಂದ ಕಳ್ಳತನ ಮಾಡಲು ಬಂದಿದ್ದ ಮನೆಯಲ್ಲೇ ಕಳ್ಳರು ಲಾಕ್
ಕಳ್ಳತನ ಮಾಡಲು ಬಂದ ಮನೆಯಲ್ಲೇ ಕಳ್ಳರು ಲಾಕ್ ಆಗಿರುವ ಘಟನೆ ಕರ್ನಾಟಕ-ತಮಿಳುನಾಡಿನ ಗಡಿ ಹೊಸೂರಿನಲ್ಲಿ ನಡೆದಿದೆ.
ಹೊಸೂರು: ಮನೆ ಕಳ್ಳತನಕ್ಕೆ ಬಂದ ಕಳ್ಳರು ಮನೆ ದೋಚಿ ಕೈಗೆ ಸಿಗದೆ ಪರಾರಿಯಾಗಿದನ್ನು ನೋಡಿದ್ದೇವೆ ಮತ್ತು ಕೇಳಿದ್ದೇವೆ. ಆದರೆ ಈ ಘಟನೆಯಲ್ಲಿ ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ ಆಗಿದ್ದಾರೆ. ಹೌದು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್ ಎಂಬುವರು ಕರ್ನಾಟಕ-ತಮಿಳುನಾಡಿನ ಗಡಿ ಹೊಸೂರಿನಲ್ಲಿ ವಾಸವಾಗಿದ್ದಾರೆ. ಸಂಕ್ರಾಂತಿ ಹಬ್ಬದ ಹಿನ್ನೆಲೆ ಕುಟುಂಬ ಮನೆಗೆ ಬೀಗ ಹಾಕಿ ಊರಿಗೆ ಹೋಗಿತ್ತು. ಇದನ್ನು ಗಮನಿಸಿದ ಕಳ್ಳರು ಹೊಂಚು ಹಾಕಿ ಮನೆ ಕಳ್ಳತನಕ್ಕೆ ಬಂದಿದ್ದರು.
ಖದೀಮರು ಮನೆಯಲ್ಲಿ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾರೆ. ಈ ವೇಳೆ ಮನೆಯಲ್ಲಿನ ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಆಚೆ ಬಂದು ಕಳ್ಳರಿಗೆ ತಿಳಿಯದಂತೆ ಮನೆಯ ಬಾಗಿಲು ಮತ್ತು ಗ್ರಿಲ್ನ್ನು ಹಾಕಿದ್ದಾರೆ. ನಂತರ ಕಳ್ಳರು ಹೊರಗಡೆ ಹೋಗಲು ಯತ್ನಿಸಿದಾಗ ಸಾದ್ಯವಾಗಿಲ್ಲ. ಹೀಗಾಗಿ ಮನೆಯಲ್ಲೇ ಲಾಕ್ ಆಗಿದ್ದ್ದಾರೆ.
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ

