Hosuru: ಸ್ಥಳೀಯರ ಚಾಣಕ್ಷತನದಿಂದ ಕಳ್ಳತನ ಮಾಡಲು ಬಂದಿದ್ದ ಮನೆಯಲ್ಲೇ ಕಳ್ಳರು ಲಾಕ್
ಕಳ್ಳತನ ಮಾಡಲು ಬಂದ ಮನೆಯಲ್ಲೇ ಕಳ್ಳರು ಲಾಕ್ ಆಗಿರುವ ಘಟನೆ ಕರ್ನಾಟಕ-ತಮಿಳುನಾಡಿನ ಗಡಿ ಹೊಸೂರಿನಲ್ಲಿ ನಡೆದಿದೆ.
ಹೊಸೂರು: ಮನೆ ಕಳ್ಳತನಕ್ಕೆ ಬಂದ ಕಳ್ಳರು ಮನೆ ದೋಚಿ ಕೈಗೆ ಸಿಗದೆ ಪರಾರಿಯಾಗಿದನ್ನು ನೋಡಿದ್ದೇವೆ ಮತ್ತು ಕೇಳಿದ್ದೇವೆ. ಆದರೆ ಈ ಘಟನೆಯಲ್ಲಿ ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ ಆಗಿದ್ದಾರೆ. ಹೌದು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್ ಎಂಬುವರು ಕರ್ನಾಟಕ-ತಮಿಳುನಾಡಿನ ಗಡಿ ಹೊಸೂರಿನಲ್ಲಿ ವಾಸವಾಗಿದ್ದಾರೆ. ಸಂಕ್ರಾಂತಿ ಹಬ್ಬದ ಹಿನ್ನೆಲೆ ಕುಟುಂಬ ಮನೆಗೆ ಬೀಗ ಹಾಕಿ ಊರಿಗೆ ಹೋಗಿತ್ತು. ಇದನ್ನು ಗಮನಿಸಿದ ಕಳ್ಳರು ಹೊಂಚು ಹಾಕಿ ಮನೆ ಕಳ್ಳತನಕ್ಕೆ ಬಂದಿದ್ದರು.
ಖದೀಮರು ಮನೆಯಲ್ಲಿ ಕಳ್ಳತನ ಮಾಡಲು ಮನೆಗೆ ನುಗ್ಗಿದ್ದಾರೆ. ಈ ವೇಳೆ ಮನೆಯಲ್ಲಿನ ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಆಚೆ ಬಂದು ಕಳ್ಳರಿಗೆ ತಿಳಿಯದಂತೆ ಮನೆಯ ಬಾಗಿಲು ಮತ್ತು ಗ್ರಿಲ್ನ್ನು ಹಾಕಿದ್ದಾರೆ. ನಂತರ ಕಳ್ಳರು ಹೊರಗಡೆ ಹೋಗಲು ಯತ್ನಿಸಿದಾಗ ಸಾದ್ಯವಾಗಿಲ್ಲ. ಹೀಗಾಗಿ ಮನೆಯಲ್ಲೇ ಲಾಕ್ ಆಗಿದ್ದ್ದಾರೆ.
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

