ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಮುದ್ದಾಗಿ ಥ್ಯಾಂಕ್ಸ್ ಹೇಳಿದ ಆನೆ ಮರಿ

Updated on: Jun 06, 2025 | 10:35 PM

ಛತ್ತೀಸ್‌ಗಢದ ರಾಯಗಢದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರು ಗುಂಡಿಯಿಂದ ಮರಿ ಆನೆಯನ್ನು ರಕ್ಷಿಸಿದ್ದಾರೆ. ಈ ರಕ್ಷಣಾ ಕಾರ್ಯಾಚರಣೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಆನೆಯನ್ನು ರಕ್ಷಿಸಿದ ನಂತರ ಆ ಆನೆಮರಿಯ ಹೃದಯಸ್ಪರ್ಶಿ ಸೂಚನೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಜೂನ್ 3ರಂದು ನಡೆದ ರಕ್ಷಣಾ ಕಾರ್ಯಾಚರಣೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಅದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಚಿಲ್ಕಗುಡ ಗ್ರಾಮದ ಬಳಿ ಮರಿಯಾನೆ ಗುಂಡಿಗೆ ಬಿದ್ದಿತ್ತು.

ರಾಯ್‌ಪುರ, ಜೂನ್ 6: ಛತ್ತೀಸ್‌ಗಢದ ರಾಯಗಢದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರು ಗುಂಡಿಯಿಂದ ಆನೆ ಮರಿಯನ್ನು ರಕ್ಷಿಸಿದ್ದಾರೆ. ಜೂನ್ 3ರಂದು ನಡೆದ ರಕ್ಷಣಾ ಕಾರ್ಯಾಚರಣೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದ್ದು, ಅದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಚಿಲ್ಕಗುಡ ಗ್ರಾಮದ ಬಳಿ ಮರಿಯಾನೆ ಗುಂಡಿಗೆ ಬಿದ್ದಿತ್ತು. ಲೈಲುಂಗ ಮತ್ತು ಘರ್ಘೋಡ ಅರಣ್ಯ ವ್ಯಾಪ್ತಿಯಲ್ಲಿ ಸುತ್ತಾಡುತ್ತಿದ್ದ ದೊಡ್ಡ ಹಿಂಡಿನ ಭಾಗವಾಗಿದ್ದ ಆನೆ ಮರಿ ಹೊಂಡದಿಂದ ಹೊರಬರಲು ಕಷ್ಟಪಡುತ್ತಿದ್ದರಿಂದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಸಮಯ ವ್ಯರ್ಥ ಮಾಡದೆ, ಗ್ರಾಮಸ್ಥರು ತಕ್ಷಣ ಆ ಪ್ರದೇಶಕ್ಕೆ ಧಾವಿಸಿ ಮರಿಯಾನೆಯನ್ನು ರಕ್ಷಿಸಿದರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More