‘ಇದು ಸಮಾಧಿ ಅಲ್ಲ, ಡಾ. ರಾಜ್ ಬೃಂದಾವನ’: ಅಣ್ಣಾವ್ರ ಪುಣ್ಯಸ್ಮರಣೆ ದಿನ ರಾಘಣ್ಣ ಹೀಗೆ ಹೇಳಿದ್ದೇಕೆ?
Dr Rajkumar: ಡಾ. ರಾಜ್ಕುಮಾರ್ ಅವರ ಸಮಾಧಿಗೆ ಕುಟುಂಬದವರು ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರಾಘವೇಂದ್ರ ರಾಜ್ಕುಮಾರ್ ಅವರು ಈ ವಿಚಾರ ತಿಳಿಸಿದ್ದಾರೆ.
ಮೇರುನಟ ಡಾ. ರಾಜ್ಕುಮಾರ್ (Dr Rajkumar) ಅವರು ನಿಧನರಾಗಿ ಇಂದಿಗೆ (ಏಪ್ರಿಲ್ 12) ಬರೋಬ್ಬರಿ 17 ವರ್ಷ ಕಳೆದಿದೆ. ಈ ಪ್ರಯುಕ್ತ ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಅವರ ಸಮಾಧಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಇಂದು ರಾಜ್ ಕುಟುಂಬದ ಸದಸ್ಯರು ಅಣ್ಣಾವ್ರ ಸಮಾಧಿಗೆ (Dr Rajkumar Samadhi) ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ರಾಘವೇಂದ್ರ ರಾಜ್ಕುಮಾರ್ ಅವರು ಮಾತನಾಡಿದ್ದಾರೆ. ‘ನೀವು ಇದನ್ನು ಸಮಾಧಿ ಅಂತ ಕರೆಯಬೇಡಿ. ದಯವಿಟ್ಟು ಬೃಂದಾವನ ಅಂತ ಕರೆಯಿರಿ ಎಂದು ನನಗೆ ಐಎಎಸ್ ಆಫೀಸರ್ ಒಬ್ಬರು ಬರೆದು ಕಳಿಸಿದ್ದರು. ಬೃಂದಾವನ ಅಲ್ಲದೇ ಹೋಗಿದ್ದರೆ ಇಂದಿಗೂ ಇಷ್ಟು ಜನ ಯಾಕೆ ಬರುತ್ತಿದ್ದರು? ಪ್ರತಿ ವರ್ಷ ಅಭಿಮಾನಿಗಳು ಅನೇಕ ಕಾರ್ಯಗಳನ್ನು ಮಾಡುತ್ತಿದ್ದಾರೆ’ ಎಂದು ರಾಘವೇಂದ್ರ ರಾಜ್ಕುಮಾರ್ (Raghavendra Rajkumar) ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Apr 12, 2023 05:30 PM
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

