AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ಸಮಾಧಿ ಅಲ್ಲ, ಡಾ. ರಾಜ್​ ಬೃಂದಾವನ’: ಅಣ್ಣಾವ್ರ ಪುಣ್ಯಸ್ಮರಣೆ ದಿನ ರಾಘಣ್ಣ ಹೀಗೆ ಹೇಳಿದ್ದೇಕೆ?

‘ಇದು ಸಮಾಧಿ ಅಲ್ಲ, ಡಾ. ರಾಜ್​ ಬೃಂದಾವನ’: ಅಣ್ಣಾವ್ರ ಪುಣ್ಯಸ್ಮರಣೆ ದಿನ ರಾಘಣ್ಣ ಹೀಗೆ ಹೇಳಿದ್ದೇಕೆ?

ಮದನ್​ ಕುಮಾರ್​
|

Updated on:Apr 12, 2023 | 5:30 PM

Share

Dr Rajkumar: ಡಾ. ರಾಜ್​ಕುಮಾರ್​ ಅವರ ಸಮಾಧಿಗೆ ಕುಟುಂಬದವರು ಪೂಜೆ ಸಲ್ಲಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರಾಘವೇಂದ್ರ ರಾಜ್​ಕುಮಾರ್​ ಅವರು ಈ ವಿಚಾರ ತಿಳಿಸಿದ್ದಾರೆ.

ಮೇರುನಟ ಡಾ. ರಾಜ್​ಕುಮಾರ್ (Dr Rajkumar)​ ಅವರು ನಿಧನರಾಗಿ ಇಂದಿಗೆ (ಏಪ್ರಿಲ್​ 12) ಬರೋಬ್ಬರಿ 17 ವರ್ಷ ಕಳೆದಿದೆ. ಈ ಪ್ರಯುಕ್ತ ಕಂಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಅವರ ಸಮಾಧಿಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಇಂದು ರಾಜ್​ ಕುಟುಂಬದ ಸದಸ್ಯರು ಅಣ್ಣಾವ್ರ ಸಮಾಧಿಗೆ (Dr Rajkumar Samadhi) ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ರಾಘವೇಂದ್ರ ರಾಜ್​ಕುಮಾರ್​ ಅವರು ಮಾತನಾಡಿದ್ದಾರೆ. ‘ನೀವು ಇದನ್ನು ಸಮಾಧಿ ಅಂತ ಕರೆಯಬೇಡಿ. ದಯವಿಟ್ಟು ಬೃಂದಾವನ ಅಂತ ಕರೆಯಿರಿ ಎಂದು ನನಗೆ ಐಎಎಸ್​ ಆಫೀಸರ್​ ಒಬ್ಬರು ಬರೆದು ಕಳಿಸಿದ್ದರು. ಬೃಂದಾವನ ಅಲ್ಲದೇ ಹೋಗಿದ್ದರೆ ಇಂದಿಗೂ ಇಷ್ಟು ಜನ ಯಾಕೆ ಬರುತ್ತಿದ್ದರು? ಪ್ರತಿ ವರ್ಷ ಅಭಿಮಾನಿಗಳು ಅನೇಕ ಕಾರ್ಯಗಳನ್ನು ಮಾಡುತ್ತಿದ್ದಾರೆ’ ಎಂದು ರಾಘವೇಂದ್ರ ರಾಜ್​ಕುಮಾರ್​ (Raghavendra Rajkumar) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Apr 12, 2023 05:30 PM

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More