ಪ್ರೀಮಿಯರ್​ ಮದ್ಯದ ದರ ಇಳಿಕೆ ಬಗ್ಗೆ ಅಬಕಾರಿ ಸಚಿವ ಆರ್​ಬಿ ತಿಮ್ಮಾಪುರ ಹೇಳಿದ್ದಿಷ್ಟು

| Updated By: ಗಂಗಾಧರ​ ಬ. ಸಾಬೋಜಿ

Updated on: Aug 28, 2024 | 3:43 PM

ಕರ್ನಾಟಕದಲ್ಲಿ ನಿನ್ನೆ ಪ್ರೀಮಿಯರ್​ ಮದ್ಯದ ದರ ಇಳಿಕೆ ಮಾಡಲಾಗಿದೆ. ಆ ಮೂಲಕ ರಾಜ್ಯ ಸರ್ಕಾರ ಮದ್ಯಪ್ರಿಯರಿಗೆ ಗುಡ್ ನ್ಯೂಸ್​ ನೀಡಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಪ್ರತಿಕ್ರಿಯಿಸಿದ್ದು, ಹೊರ ರಾಜ್ಯದಿಂದ ಮದ್ಯ ತರುವುದನ್ನು ತಡೆಯುವುದಕ್ಕೆ ಈ ಕ್ರಮಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಬೆಂಗಳೂರು, ಆಗಸ್ಟ್​ 28: ಹೊರ ರಾಜ್ಯದಿಂದ ಮದ್ಯ ತರುವುದನ್ನು ತಡೆಯುವುದಕ್ಕೆ ಮದ್ಯದ (Liquor) ದರ ಇಳಿಕೆ ಮಾಡಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದ್ದಾರೆ. ಕರ್ನಾಟಕದಲ್ಲಿ ಪ್ರೀಮಿಯರ್​ ಮದ್ಯದ ದರ ಇಳಿಕೆ ವಿಚಾರವಾಗಿ ಮಾತನಾಡಿದ ಅವರು, ಬೇರೆ ರಾಜ್ಯದಿಂದ ಆಮದು ತಡೆಯಲು ದರ ಕಡಿಮೆ ಮಾಡಿದ್ದೇವೆ. ಇಲ್ಲಿ ಗುಣಮಟ್ಟದ ಮದ್ಯ ಇದ್ದರೂ ಹೊರಗಡೆಯಿಂದ ಬರ್ತಿತ್ತು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us on