ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು? ಇಲ್ಲಿದೆ ವಿವರ

Edited By:

Updated on: Apr 07, 2025 | 4:30 PM

ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ವಾರಾಹಿ ಪಂಜುರ್ಲಿ ದೈವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದಲ್ಲಿ ಏನೆಲ್ಲ ನಡೆಯಿತು ಎಂಬುದನ್ನು ದೈವಸ್ಥಾನದ ಗೌರವಾಧ್ಯಕ್ಷರಾದ ರವಿ ಪ್ರಸನ್ನ ಅವರು ವಿವರಿಸಿದ್ದಾರೆ. ಪತ್ನಿ ಹಾಗೂ ಮಕ್ಕಳ ಜೊತೆ ಬಂದು ರಿಷಬ್ ಶೆಟ್ಟಿ ಅವರು ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ.

ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ರಿಷಬ್ ಶೆಟ್ಟಿ (Rishab Shetty) ಅವರು ಮಂಗಳೂರಿನ ಬಾರೆಬೈಲ್​ನ ವಾರಾಹಿ ಪಂಜುರ್ಲಿ (Panjurli) ದೈವಸ್ಥಾನಕ್ಕೆ ಬಂದಿದ್ದಾರೆ. ಆ ಕುರಿತು ದೈವಸ್ಥಾನದ ಗೌರವಾಧ್ಯಕ್ಷ ರವಿ ಪ್ರಸನ್ನ ಮಾತನಾಡಿದ್ದಾರೆ. ‘ನಮ್ಮ ಆಹ್ವಾನದ ಮೇರೆಗೆ ರಿಷಬ್ ಶೆಟ್ಟಿ ಅವರು ಬಂದಿದ್ದಾರೆ. ಪಂಜುರ್ಲಿ ಎಂದರೆ ಅವರಿಗೆ ಆತ್ಮೀಯತೆ. ಯಾವುದಕ್ಕೂ ಗಡಿಬಿಡಿ ಮಾಡಬೇಡಿ ಅಂತ ಹೇಳಿದರು. ದೈವಸ್ಥಾನದ ಎದುರು ಪ್ರಸಾದ ನೀಡಲು ಅವರನ್ನು ಕರೆದೆವು. ಎಲ್ಲರೂ ಪ್ರಸಾದ ಸ್ವೀಕರಿಸಿದರು. ಮಗನ ಹುಟ್ಟುಹಬ್ಬ ಆದ್ದರಿಂದ ಸಂತೋಷದಲ್ಲಿ ಇದ್ದರು. ಪ್ರಸಾದದ ಸಂದರ್ಭದಲ್ಲಿ ಏನಾದರೂ ಹೇಳುವುದು ಇದೆಯಾ ಎಂದು ದೈವ ಕೇಳಿತು. ಒಳ್ಳೆಯದು ಮಾಡುತ್ತೇನೆ ಅಂತ ದೈವ ಹೇಳಿದೆ’ ಎಂದಿದ್ದಾರೆ ರವಿ ಪ್ರಸನ್ನ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More