‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್ಗೆ ಪ್ರಶಸ್ತಿ ಬರಲಿಲ್ಲ ಯಾಕೆ? ಕಾರಣ ತಿಳಿಸಿದ ನಿರ್ದೇಶಕರು
ದರ್ಶನ್ ನಟನೆಯ ‘ನಮ್ಮ ಪ್ರೀತಿಯ ರಾಮು’ ಸಿನಿಮಾ ಫೆ.14ರಂದು ಮರು ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ನಿರ್ದೇಶಕರು ಈಗ ಕೆಲವು ಇಂಟರೆಸ್ಟಿಂಗ್ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಸಿನಿಮಾಗಾಗಿ ದರ್ಶನ್ ಅವರು ತುಂಬ ಕಷ್ಟಪಟ್ಟಿದ್ದರು. ಬೆಂಗಳೂರಿನಲ್ಲಿ 100 ದಿನ ಪ್ರದರ್ಶನ ಆಗಲಿಲ್ಲ ಎಂಬ ಬೇಸರ ದರ್ಶನ್ ಅವರಿಗೆ ಇತ್ತು ಎಂದು ನಿರ್ದೇಶಕರು ಹೇಳಿದ್ದಾರೆ.
‘ನಮ್ಮ ಪ್ರೀತಿಯ ರಾಮು’ ಸಿನಿಮಾದಲ್ಲಿನ ದರ್ಶನ್ ಅವರ ನಟನೆಯನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಾರೆ. ಆದರೆ ಆ ಚಿತ್ರಕ್ಕೆ ದರ್ಶನ್ ಅವರಿಗೆ ಯಾವುದೇ ಪ್ರಶಸ್ತಿ ಸಿಗಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ನಿರ್ದೇಶಕರಾದ ಸಂಜಯ್ ಮತ್ತು ವಿಜಯ್ ಅವರು ವಿವರಿಸಿದ್ದಾರೆ. ‘ಮೈಸೂರಲ್ಲಿ 100 ದಿನ, ಬೆಂಗಳೂರಲ್ಲಿ 50 ದಿನ ಪ್ರದರ್ಶನ ಕಂಡ ಸಿನಿಮಾ ಇದು. ಈ ಚಿತ್ರಕ್ಕೆ ದರ್ಶನ್ ತುಂಬ ಕಷ್ಟಪಟ್ಟಿದ್ದಾರೆ. ಜೀವನಪೂರ್ತಿ ಅವರು ಈ ಸಿನಿಮಾವನ್ನು ನೆನಪಿಸಿಕೊಳ್ಳುತ್ತಾರೆ. ಪ್ರಶಸ್ತಿಗೆ ಈ ಸಿನಿಮಾವನ್ನು ಕಳಿಸಿರಲಿಲ್ಲ. ಹಾಗಾಗಿ ಪ್ರಶಸ್ತಿ ಬರಲಿಲ್ಲ. ತಾವು ಮಾಡಿದ ಪ್ರಯತ್ನಕ್ಕಾಗಿ ಈ ಸಿನಿಮಾಗೆ ಅವಾರ್ಡ್ ಬರಬೇಕು ಎಂಬ ಆಸೆ ಅವರಿಗೆ ಇತ್ತು. ಆದರೆ ನಿರ್ಮಾಪಕರು ಅವಾರ್ಡ್ಗೆ ಕಳಿಸಲಿಲ್ಲ. ಆ ಬಗ್ಗೆ ದರ್ಶನ್ ಅವರಿಗೆ ಬೇಸರ ಇತ್ತು’ ಎಂದು ಸಂಜಯ್ ಮತ್ತು ವಿಜಯ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
