ನಿರ್ಮಲಾ ಸೀತಾರಾಮನ್​ರನ್ನು ಕರ್ನಾಟಕದಿಂದ ಕಳಿಸಿದರೂ ರಾಜ್ಯಕ್ಕೆ ಏನೂ ಪ್ರಯೋಜನವಾಗಿಲ್ಲ: ಪ್ರಿಯಾಂಕ್ ಖರ್ಗೆ

ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿತ್ತು, ಅದರೆ ಅದು ಸಾಧ್ಯವಾಗಿಲ್ಲ, ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಕಳೆದ 50 ವರ್ಷಗಳಲ್ಲಿ ಅತಿಹೆಚ್ಚು ಅಂತ ಹೇಳಲಾಗಿದೆ, ಯುದ್ಧಗ್ರಸ್ಥ ಇಸ್ರೇಲ್ ಗೆ ಉದ್ಯೋಗ ಅರಸಿಕೊಂಡು ನಮ್ಮ ದೇಶದ 10,000 ಯುವಕರು ಹೋಗುತ್ತಿದ್ದಾರೆಂದರೆ ನಿರುದ್ಯೋಗ ಸಮಸ್ಯೆ ಎಷ್ಟು ಗಂಭೀರವಾಗಿದೆ ಅನ್ನೋದು ಗೊತ್ತಾಗುತ್ತದೆ ಎಂದು ಖರ್ಗೆ ಹೇಳಿದರು.

ನಿರ್ಮಲಾ ಸೀತಾರಾಮನ್​ರನ್ನು ಕರ್ನಾಟಕದಿಂದ ಕಳಿಸಿದರೂ ರಾಜ್ಯಕ್ಕೆ ಏನೂ ಪ್ರಯೋಜನವಾಗಿಲ್ಲ: ಪ್ರಿಯಾಂಕ್ ಖರ್ಗೆ
|

Updated on: Feb 01, 2024 | 1:34 PM

ಬೆಂಗಳೂರು: ಸಂಪುಟ ಸಭೆಯಲ್ಲಿ ಭಾಗಿಯಾಗಲು ವಿಧಾನ ಸೌಧಕ್ಕೆ ಆಗಮಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ನೂತನ ಸಂಸತ್ತಿನಲ್ಲಿ ಮಂಡಿಸಿದ ಮಧ್ಯಂತರ ಬಜೆಟ್ 2024 (Union Budget 2024) ಕುರಿತು ಪ್ರತಿಕ್ರಿಯೆ ನೀಡಿದರು. ಕೇಂದ್ರದ ಬಜೆಟ್ ಮೇಲೆ ತಮಗೆ ಯಾವುದೇ ನಿರೀಕ್ಷೆ ಇಲ್ಲವೆಂದ ಅವರು ಕಳೆದ 10 ವರ್ಷಗಳಿಂದ ಕನ್ನಡಿಗರಿಗೆ ಕೇವಲ ಅನ್ಯಾಯವಾಗುತ್ತಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿತ್ತು, ಅದರೆ ಅದು ಸಾಧ್ಯವಾಗಿಲ್ಲ, ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಕಳೆದ 50 ವರ್ಷಗಳಲ್ಲಿ ಅತಿಹೆಚ್ಚು ಅಂತ ಹೇಳಲಾಗಿದೆ, ಯುದ್ಧಗ್ರಸ್ಥ ಇಸ್ರೇಲ್ ಗೆ ಉದ್ಯೋಗ ಅರಸಿಕೊಂಡು ನಮ್ಮ ದೇಶದ 10,000 ಯುವಕರು ಹೋಗುತ್ತಿದ್ದಾರೆಂದರೆ ನಿರುದ್ಯೋಗ ಸಮಸ್ಯೆ ಎಷ್ಟು ಗಂಭೀರವಾಗಿದೆ ಅನ್ನೋದು ಗೊತ್ತಾಗುತ್ತದೆ. ಸರ್ಕಾರ ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುತ್ತದೆ, ರೈತರ ಆದಾಯ ದುಪ್ಪಟ್ಟು ಮಾಡೋದಾಗಿ ಹೇಳುತ್ತದೆ, ವಿದೇಶಿ ಬಂಡವಾಳ ಹೆಚ್ಚಿಸುವ ಬಗ್ಗೆ ಚರ್ಚೆಯಾಗುತ್ತದೆ, ಆದರೆ ವಾಸ್ತವದಲ್ಲಿ ಯಾವ ಯೋಜನೆಯೂ ಕರ್ನಾಟಕದಲ್ಲಿ ಜಾರಿಗೊಳ್ಳಲ್ಲ. ಕರ್ನಾಟಕದಿಂದಲೇ ರಾಜ್ಯಸಭೆಗೆ ಹೋಗಿರುವ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕಕ್ಕೆ ನೀಡಿದ ಕೊಡುಗೆಯಾದರೂ ಏನು ಅಂತ ಯೋಚಿಸಬೇಕಾದ ಅವಶ್ಯಕತೆಯಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ