AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕಣ್ಮನ ಸೆಳೆದ ಲಕ್ಷದೀಪೋತ್ಸವ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕಣ್ಮನ ಸೆಳೆದ ಲಕ್ಷದೀಪೋತ್ಸವ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Jan 30, 2025 | 11:02 AM

Share

ಸುತ್ತೂರು ಜಾತ್ರಾ ಮಹೋತ್ಸವವು ಜನೆವರಿ 26 ರಂದು ಆರಂಭಗೊಂಡಿದೆ ಮತ್ತು 6 ದಿನಗಳ ಕಾಲ ನಡೆಯುವ ಧಾರ್ಮಿಕ ಉತ್ಸವ ನಾಳೆ ಅಂದರೆ ಶುಕ್ರವಾರ ಸಂಪನ್ನಗೊಳ್ಳುತ್ತದೆ. ಜನೆವರಿ 28ರಂದು ನಡೆದ ರಥೋತ್ಸವವನ್ನು ಟಿವಿ9 ವರದಿ ಮಾಡಿದೆ. ಹಲವಾರು ಧಾರ್ಮಿಕ ಅಚರಣೆಗಳ ಜೊತೆ ಸುತ್ತೂರು ಮಠದ ಶ್ರೀಗಳಾಗಿರುವ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಸಮಕ್ಷಮ ಸಾಮೂಹಿಕ ವಿವಾಹ ಕಾರ್ಯಕ್ರಮವೂ ನಡೆದಿದೆ.

ಮೈಸೂರು: ಈಗಾಗಲೇ ವರದಿಯಾಗಿರುವಂತೆ ಸುತ್ತೂರು ಜಾತ್ರಾ ಮಹೋತ್ಸವ ಆರಂಭಗೊಂಡು ಇವತ್ತಿಗೆ 5ನೇ ದಿನ. ಆದಿ ಜಗದ್ಗುರು ಶಿವರಾತ್ರೀಶ್ವವರ ಶಿವಯೋಗಿ ಮಹೋತ್ಸವದಲ್ಲಿ ನಿನ್ನೆ ರಾತ್ರಿ ಲಕ್ಷ ದೀಪೋತ್ಸವ ಬಹು ವಿಜೃಂಭಣೆಯಿಂದ ನಡೆಯಿತು. ಜಾತ್ರೆಯಲ್ಲಿ ಭಾಗಿಯಾಗಿದ್ದ ಲಕ್ಷಾಂತರ ಭಕ್ತಾದಿಗಳು ದೀಪ ಬೆಳಗಿ ತಮ್ಮ ಹರಕೆ ಪೂರೈಸಿಕೊಂಡರು. ದೀಪೋತ್ಸವದ ವಿಹಂಗಮ ದೃಶ್ಯವು ಡ್ರೋಣ್ ಕೆಮೆರಾದಲ್ಲಿ ಸೆರೆಯಾಗಿದ್ದು ಇದನ್ನು ವೀಕ್ಷಿಸುವುದು ಮನಸ್ಸಿಗೆ ಮುದ ನೀಡುತ್ತದೆ. ಬಣ್ಣಬಣ್ಣದ ವಿದ್ಯುತ್ ದೀಪಗಳ ಚಿತ್ತಾರ ಕಣ್ಮನ ಸೆಳೆಯುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಅಮಿತ್​ ಶಾಗೆ ಶ್ರೀಗಂಧದ ಚಾಮುಂಡೇಶ್ವರಿ ದೇವಿ ವಿಗ್ರಹ ಉಡುಗೊರೆ ನೀಡಿದ ಸುತ್ತೂರು ಶ್ರೀ

Published on: Jan 30, 2025 10:40 AM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.