AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರ್​ಗೆ ಪ್ರಧಾನಿ ಮೋದಿ ಭೇಟಿ: ಜನರಲ್ಲಿ ಹರ್ಷೋನ್ಮಾದ, ಕಣಿವೆಯಲ್ಲಿ ಪ್ರತಿಧ್ವನಿಸುತ್ತಿರುವ ಮೋದಿ ಸಾಬ್ ಜಿಂದಾಬಾದ್ ಘೋಷಣೆ!

ಬೇರೆ ಬೇರೆ ಕಡೆಗಳಿಂದ ಆಗಮಿಸಿರುವ ಮುಸ್ಲಿಂ ಸಮುದಾಯದ ಕಾಶ್ಮೀರಿಗಳು ‘ಮೋದಿ ಸಾಬ್ ಜಿಂದಾಬಾದ್’ ಎಂದು ಕೂಗುತ್ತಿದ್ದಾರೆ. ಕಾಶ್ಮೀರಿ ಪಂಡಿತರು ಮತ್ತು ಅಲ್ಲಿ ವಾಸವಾಗಿರುವ ಇತರ ಸಮುದಾಯಗಳ ಜನ ‘ಹರ್ ಹರ್ ಮೋದಿ ಘರ್ ಘರ್ ಮೋದಿ’ ಅಂತ ಘೋಷಣೆ ಕೂಗುತ್ತಿದ್ದಾರೆ. ಪ್ರಧಾನಿ ಮೋದಿಯವರು ಇಂದು ಶ್ರೀನಗರದ ಭಕ್ಷಿ ಸ್ಟೇಡಿಯಂನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Mar 07, 2024 | 12:29 PM

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು (Article 370) ರದ್ದುಗೊಳಿಸಿದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮೊದಲ ಬಾರಿಗೆ ಕಣಿವೆ ಪ್ರದೇಶಕ್ಕೆ ಇವತ್ತು ಭೇಟಿ ನೀಡುತ್ತಿದ್ದು ಅವರನ್ನು ಸ್ವಾಗತಿಸಲು ಇಡೀ ಜಮ್ಮು ಮತ್ತು ಕಾಶ್ಮೀರದ ಜನ (people of Jammu and Kashmir) ರಸ್ತೆಗಳ ಮೇಲೆ ನೆರೆದಂತೆ ಕಾಣುತ್ತಿದೆ. ಜನ ಖುಷಿಯಿಂದ ಬೀಗುತ್ತಿದ್ದಾರೆ ಮತ್ತು ಮೋದಿಯವರನ್ನು ಕಾಣಲು ಇನ್ನಿಲ್ಲದ ಕಾತುರತೆಯಿಂದ ಕಾಯುತ್ತಿದ್ದಾರೆ. ಎಲ್ಲ ಸಮುದಾಯ ಮತ್ತು ವರ್ಗಗಳ ಜನರನ್ನು ದೃಶ್ಯಗಳಲ್ಲಿ ನೋಡಬಹುದು. ಪಹೆಲ್ಗಾಂವ್ ನಿಂದ ಶ್ರೀನಗರ್ ಗೆ ಬಂದಿರುವ ಕಾಶ್ಮೀರಿಗಳು ನಾವು ಶಾಂತಿದೂತ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಸ್ವಾಗತ ಬಯಸುತ್ತೇವೆ, ಅವರು 370 ವಿಧಿಯನ್ನು ತೆಗೆದುಹಾಕಿದ ಬಳಿಕ 70 ವರ್ಷಗಳಿಂದ ಕಾಣೆಯಾಗಿದ್ದ ಶಾಂತಿ ಈಗ ನೆಲೆಸಿದೆ ಮತ್ತು ನಾವೆಲ್ಲ ಸೌಹಾರ್ದತೆಯಿಂದ ಬದುಕು ನಡೆಸುತ್ತಿದ್ದೇವೆ ಎನ್ನುತ್ತಿದ್ದಾರೆ. ಬೇರೆ ಬೇರೆ ಕಡೆಗಳಿಂದ ಮುಸ್ಲಿಂ ಸಮುದಾಯದ ಕಾಶ್ಮೀರಿಗಳು ‘ಮೋದಿ ಸಾಬ್ ಜಿಂದಾಬಾದ್’ ಎಂದು ಕೂಗುತ್ತಿದ್ದಾರೆ. ಕಾಶ್ಮೀರಿ ಪಂಡಿತರು ಮತ್ತು ಅಲ್ಲಿ ವಾಸವಾಗಿರುವ ಇತರ ಸಮುದಾಯಗಳ ಜನ ‘ಹರ್ ಹರ್ ಮೋದಿ ಘರ್ ಘರ್ ಮೋದಿ’ ಅಂತ ಘೋಷಣೆ ಕೂಗುತ್ತಿದ್ದಾರೆ. ಪ್ರಧಾನಿ ಮೋದಿಯವರು ಇಂದು ಶ್ರೀನಗರದ ಭಕ್ಷಿ ಸ್ಟೇಡಿಯಂನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಂಗಾಳದ ಟಿಎಂಸಿ ಸರ್ಕಾರದ ಅಂತ್ಯಕ್ಕೆ ನಾಂದಿ ಹಾಡಲಿದೆ: ನರೇಂದ್ರ ಮೋದಿ

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು