AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರ್​ಗೆ ಪ್ರಧಾನಿ ಮೋದಿ ಭೇಟಿ: ಜನರಲ್ಲಿ ಹರ್ಷೋನ್ಮಾದ, ಕಣಿವೆಯಲ್ಲಿ ಪ್ರತಿಧ್ವನಿಸುತ್ತಿರುವ ಮೋದಿ ಸಾಬ್ ಜಿಂದಾಬಾದ್ ಘೋಷಣೆ!

ಬೇರೆ ಬೇರೆ ಕಡೆಗಳಿಂದ ಆಗಮಿಸಿರುವ ಮುಸ್ಲಿಂ ಸಮುದಾಯದ ಕಾಶ್ಮೀರಿಗಳು ‘ಮೋದಿ ಸಾಬ್ ಜಿಂದಾಬಾದ್’ ಎಂದು ಕೂಗುತ್ತಿದ್ದಾರೆ. ಕಾಶ್ಮೀರಿ ಪಂಡಿತರು ಮತ್ತು ಅಲ್ಲಿ ವಾಸವಾಗಿರುವ ಇತರ ಸಮುದಾಯಗಳ ಜನ ‘ಹರ್ ಹರ್ ಮೋದಿ ಘರ್ ಘರ್ ಮೋದಿ’ ಅಂತ ಘೋಷಣೆ ಕೂಗುತ್ತಿದ್ದಾರೆ. ಪ್ರಧಾನಿ ಮೋದಿಯವರು ಇಂದು ಶ್ರೀನಗರದ ಭಕ್ಷಿ ಸ್ಟೇಡಿಯಂನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 07, 2024 | 12:29 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು (Article 370) ರದ್ದುಗೊಳಿಸಿದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮೊದಲ ಬಾರಿಗೆ ಕಣಿವೆ ಪ್ರದೇಶಕ್ಕೆ ಇವತ್ತು ಭೇಟಿ ನೀಡುತ್ತಿದ್ದು ಅವರನ್ನು ಸ್ವಾಗತಿಸಲು ಇಡೀ ಜಮ್ಮು ಮತ್ತು ಕಾಶ್ಮೀರದ ಜನ (people of Jammu and Kashmir) ರಸ್ತೆಗಳ ಮೇಲೆ ನೆರೆದಂತೆ ಕಾಣುತ್ತಿದೆ. ಜನ ಖುಷಿಯಿಂದ ಬೀಗುತ್ತಿದ್ದಾರೆ ಮತ್ತು ಮೋದಿಯವರನ್ನು ಕಾಣಲು ಇನ್ನಿಲ್ಲದ ಕಾತುರತೆಯಿಂದ ಕಾಯುತ್ತಿದ್ದಾರೆ. ಎಲ್ಲ ಸಮುದಾಯ ಮತ್ತು ವರ್ಗಗಳ ಜನರನ್ನು ದೃಶ್ಯಗಳಲ್ಲಿ ನೋಡಬಹುದು. ಪಹೆಲ್ಗಾಂವ್ ನಿಂದ ಶ್ರೀನಗರ್ ಗೆ ಬಂದಿರುವ ಕಾಶ್ಮೀರಿಗಳು ನಾವು ಶಾಂತಿದೂತ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಸ್ವಾಗತ ಬಯಸುತ್ತೇವೆ, ಅವರು 370 ವಿಧಿಯನ್ನು ತೆಗೆದುಹಾಕಿದ ಬಳಿಕ 70 ವರ್ಷಗಳಿಂದ ಕಾಣೆಯಾಗಿದ್ದ ಶಾಂತಿ ಈಗ ನೆಲೆಸಿದೆ ಮತ್ತು ನಾವೆಲ್ಲ ಸೌಹಾರ್ದತೆಯಿಂದ ಬದುಕು ನಡೆಸುತ್ತಿದ್ದೇವೆ ಎನ್ನುತ್ತಿದ್ದಾರೆ. ಬೇರೆ ಬೇರೆ ಕಡೆಗಳಿಂದ ಮುಸ್ಲಿಂ ಸಮುದಾಯದ ಕಾಶ್ಮೀರಿಗಳು ‘ಮೋದಿ ಸಾಬ್ ಜಿಂದಾಬಾದ್’ ಎಂದು ಕೂಗುತ್ತಿದ್ದಾರೆ. ಕಾಶ್ಮೀರಿ ಪಂಡಿತರು ಮತ್ತು ಅಲ್ಲಿ ವಾಸವಾಗಿರುವ ಇತರ ಸಮುದಾಯಗಳ ಜನ ‘ಹರ್ ಹರ್ ಮೋದಿ ಘರ್ ಘರ್ ಮೋದಿ’ ಅಂತ ಘೋಷಣೆ ಕೂಗುತ್ತಿದ್ದಾರೆ. ಪ್ರಧಾನಿ ಮೋದಿಯವರು ಇಂದು ಶ್ರೀನಗರದ ಭಕ್ಷಿ ಸ್ಟೇಡಿಯಂನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಂಗಾಳದ ಟಿಎಂಸಿ ಸರ್ಕಾರದ ಅಂತ್ಯಕ್ಕೆ ನಾಂದಿ ಹಾಡಲಿದೆ: ನರೇಂದ್ರ ಮೋದಿ

Follow Us
CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಟೇಮ್!
CET ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರ ಮೂಗಿಗೆ ಗಮ್ ಟೇಮ್!
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
ಕೇವಲ 3.30 ರೂಪಾಯಿಗೆ ಒಂದು ಮೊಟ್ಟೆ ಲಭ್ಯ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ