AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರ್​ಗೆ ಪ್ರಧಾನಿ ಮೋದಿ ಭೇಟಿ: ಜನರಲ್ಲಿ ಹರ್ಷೋನ್ಮಾದ, ಕಣಿವೆಯಲ್ಲಿ ಪ್ರತಿಧ್ವನಿಸುತ್ತಿರುವ ಮೋದಿ ಸಾಬ್ ಜಿಂದಾಬಾದ್ ಘೋಷಣೆ!

ಬೇರೆ ಬೇರೆ ಕಡೆಗಳಿಂದ ಆಗಮಿಸಿರುವ ಮುಸ್ಲಿಂ ಸಮುದಾಯದ ಕಾಶ್ಮೀರಿಗಳು ‘ಮೋದಿ ಸಾಬ್ ಜಿಂದಾಬಾದ್’ ಎಂದು ಕೂಗುತ್ತಿದ್ದಾರೆ. ಕಾಶ್ಮೀರಿ ಪಂಡಿತರು ಮತ್ತು ಅಲ್ಲಿ ವಾಸವಾಗಿರುವ ಇತರ ಸಮುದಾಯಗಳ ಜನ ‘ಹರ್ ಹರ್ ಮೋದಿ ಘರ್ ಘರ್ ಮೋದಿ’ ಅಂತ ಘೋಷಣೆ ಕೂಗುತ್ತಿದ್ದಾರೆ. ಪ್ರಧಾನಿ ಮೋದಿಯವರು ಇಂದು ಶ್ರೀನಗರದ ಭಕ್ಷಿ ಸ್ಟೇಡಿಯಂನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 07, 2024 | 12:29 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು (Article 370) ರದ್ದುಗೊಳಿಸಿದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ಮೊದಲ ಬಾರಿಗೆ ಕಣಿವೆ ಪ್ರದೇಶಕ್ಕೆ ಇವತ್ತು ಭೇಟಿ ನೀಡುತ್ತಿದ್ದು ಅವರನ್ನು ಸ್ವಾಗತಿಸಲು ಇಡೀ ಜಮ್ಮು ಮತ್ತು ಕಾಶ್ಮೀರದ ಜನ (people of Jammu and Kashmir) ರಸ್ತೆಗಳ ಮೇಲೆ ನೆರೆದಂತೆ ಕಾಣುತ್ತಿದೆ. ಜನ ಖುಷಿಯಿಂದ ಬೀಗುತ್ತಿದ್ದಾರೆ ಮತ್ತು ಮೋದಿಯವರನ್ನು ಕಾಣಲು ಇನ್ನಿಲ್ಲದ ಕಾತುರತೆಯಿಂದ ಕಾಯುತ್ತಿದ್ದಾರೆ. ಎಲ್ಲ ಸಮುದಾಯ ಮತ್ತು ವರ್ಗಗಳ ಜನರನ್ನು ದೃಶ್ಯಗಳಲ್ಲಿ ನೋಡಬಹುದು. ಪಹೆಲ್ಗಾಂವ್ ನಿಂದ ಶ್ರೀನಗರ್ ಗೆ ಬಂದಿರುವ ಕಾಶ್ಮೀರಿಗಳು ನಾವು ಶಾಂತಿದೂತ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಸ್ವಾಗತ ಬಯಸುತ್ತೇವೆ, ಅವರು 370 ವಿಧಿಯನ್ನು ತೆಗೆದುಹಾಕಿದ ಬಳಿಕ 70 ವರ್ಷಗಳಿಂದ ಕಾಣೆಯಾಗಿದ್ದ ಶಾಂತಿ ಈಗ ನೆಲೆಸಿದೆ ಮತ್ತು ನಾವೆಲ್ಲ ಸೌಹಾರ್ದತೆಯಿಂದ ಬದುಕು ನಡೆಸುತ್ತಿದ್ದೇವೆ ಎನ್ನುತ್ತಿದ್ದಾರೆ. ಬೇರೆ ಬೇರೆ ಕಡೆಗಳಿಂದ ಮುಸ್ಲಿಂ ಸಮುದಾಯದ ಕಾಶ್ಮೀರಿಗಳು ‘ಮೋದಿ ಸಾಬ್ ಜಿಂದಾಬಾದ್’ ಎಂದು ಕೂಗುತ್ತಿದ್ದಾರೆ. ಕಾಶ್ಮೀರಿ ಪಂಡಿತರು ಮತ್ತು ಅಲ್ಲಿ ವಾಸವಾಗಿರುವ ಇತರ ಸಮುದಾಯಗಳ ಜನ ‘ಹರ್ ಹರ್ ಮೋದಿ ಘರ್ ಘರ್ ಮೋದಿ’ ಅಂತ ಘೋಷಣೆ ಕೂಗುತ್ತಿದ್ದಾರೆ. ಪ್ರಧಾನಿ ಮೋದಿಯವರು ಇಂದು ಶ್ರೀನಗರದ ಭಕ್ಷಿ ಸ್ಟೇಡಿಯಂನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತಾಡಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಲೋಕಸಭೆ ಚುನಾವಣೆ ಬಂಗಾಳದ ಟಿಎಂಸಿ ಸರ್ಕಾರದ ಅಂತ್ಯಕ್ಕೆ ನಾಂದಿ ಹಾಡಲಿದೆ: ನರೇಂದ್ರ ಮೋದಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ