ದೀಪಾವಳಿ ಸಂಭ್ರಮ: ಹೂವು, ಹಣ್ಣು ಖರೀದಿಗೆ ಕೆ.ಆರ್. ಮಾರ್ಕೆಟ್ನಲ್ಲಿ ಮುಗಿಬಿದ್ದ ಜನ; ಟ್ರಾಫಿಕ್ ಜಾಮ್
ರಾಜ್ಯಾದ್ಯಂತ ದೀಪಾವಳಿ ಸಂಭ್ರಮ ಮನೆ ಮಾಡಿದ್ದು, ರಾಜಧಾನಿ ಬೆಂಗಳೂರಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ಹೂವು, ಹಣ್ಣುಗಳ ಖರೀದಿಗೆ ಜನ ಮನೆಯಿಂದ ಬೆಳ್ಳಂ ಬೆಳಿಗ್ಗೆ ಹೊರ ಬಂದಿದ್ದು, ನಗರದ ಕೆ.ಆರ್.ಮಾರ್ಕೆಟ್ನಲ್ಲಿ ಜನ ಸಾಗರವೇ ಕಂಡು ಬಂದಿದೆ. ಕನಕಾಂಬರ, ಮಲ್ಲಿಗೆ, ಸೇವಂತಿಗೆ, ಚೆಂಡು ಹೂವು ಸೇರಿ ಬಗೆ ಬಗೆಯ ಹೂವುಗಳ ಮಾರಾಟ ಭರದಿಂದ ಸಾಗಿದೆ.
ಬೆಂಗಳೂರು, ಅಕ್ಟೋಬರ್ 20: ದೀಪಾವಳಿ (Deepavali) ಹಬ್ಬ ಹಿನ್ನೆಲೆ ಹೂವು ಖರೀದಿಗೆ ಬೆಂಗಳೂರಿನ ಸಿಟಿ ಮಾರ್ಕೆಟ್ಗೆ ಬೆಳ್ಳಂ ಬೆಳಗ್ಗೆ ಜನ ಸಾಗರವೇ ಹರಿದು ಬಂದಿದೆ. ಕನಕಾಂಬರ, ಮಲ್ಲಿಗೆ, ಸೇವಂತಿಗೆ, ಚೆಂಡು ಹೂವು ಸೇರಿ ಬಗೆ ಬಗೆಯ ಹೂವುಗಳ ಮಾರಾಟ ಭರದಿಂದ ಸಾಗಿದ್ದು, ಸತತ ಮಳೆ ಹಿನ್ನೆಲೆ ಹೂವಿನ ದರದಲ್ಲಿ ಕೊಂಚ ಪ್ರಮಾಣದ ಏರಿಕೆ ಕಂಡು ಬಂದಿದೆ. ಜನದಟ್ಟಣೆ ಹಿನ್ನಲೆ ಕೆ.ಆರ್. ಮಾರ್ಕೆಟ್, ಅವೆನ್ಯೂ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಅಪಾಯಕಾರಿಯಾಗಿ ಫ್ಲೈಓವರ್ ರಸ್ತೆ ಮೇಲೆ ಗ್ರಾಹಕರು ವಾಹನಗಳ ಪಾರ್ಕಿಂಗ್ ಮಾಡಿ ತೆರಳಿದ ಪರಿಣಾಮ, ಸುಗಮ ಸಂಚಾರಕ್ಕೆ ಸಮಸ್ಯೆಯಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
