ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?

[lazy-load-videos-and-sticky-control id=”KEoksf7TMLI”] ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ. ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ. ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ […]

ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?

Updated on: Aug 02, 2020 | 5:56 PM

[lazy-load-videos-and-sticky-control id=”KEoksf7TMLI”]

ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ.

ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ.

ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ 50ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಫ್ಯಾಕ್ಟರಿಯಲ್ಲಿ ಸಾವಿರಾರು ನೌಕರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ,  ಜಿಲ್ಲಾಡಳಿತ ಫ್ಯಾಕ್ಟರಿಯನ್ನು ಕೆಲವು ದಿನಗಳ ಕಾಲ ಸೀಲ್​ಡೌನ್ ಮಾಡಲು ಚಿಂತನೆ ನಡೆಸಿದೆ. ಜೊತೆಗೆ, ಸೋಂಕಿತರಿಗಾಗಿ ಕಂಪನಿಯಲ್ಲಿಯೇ ಕೊವಿಡ್ ಕೇರ್ ಸೆಂಟರ್ ತೆರೆಯಲು ಸೂಚನೆ ನೀಡಿದೆ. ಕಂಪನಿಯ ಬೇಜವಾಬ್ದಾರಿತನದಿಂದ ಈ ಘಟನೆ ಸಂಭವಿಸಿದ್ದು ಇದೀಗ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವ ಹೊಣೆಯನ್ನು ಕಂಪನಿಯೇ ವಹಿಸಿಕೊಳ್ಳಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.

Published On - 12:20 pm, Sun, 2 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us