ಹೆಮ್ಮೆಯ ಕನ್ನಡಿಗ ಹುತಾತ್ಮ ಕ್ಯಾಪ್ಟನ್ ಎಂವಿ ಪ್ರಾಂಜಲ್ ಗೆ ಸಾರ್ವಜನಿಕರಿಂದ ಅಂತಿಮ ನಮನ
ರಜೌರಿಯಲ್ಲಿ ನಡೆದ ಎನ್ ಕೌಂಟರ್ ಕ್ಯಾಪ್ಟನ್ ಪ್ರಾಂಜಲ್ ಸೇರಿದಂತೆ ಒಟ್ಟು ಐವರು ಭಾರತೀಯ ಯೋಧರು ವೀರಮರಣವನ್ನಪ್ಪಿದ್ದಾರೆ. ರಜೌರಿ ಹತ್ತಿರವಿರುವ ಅರಣ್ಯ ಪ್ರದೇಶವೊಂದರಲ್ಲಿ ಗುಂಡಿನ ಕಾಳಗ ನಡೆದಿದ್ದು ಇಬ್ಬರು ಉಗ್ರರನ್ನು ಭಾರತೀಯ ಜವಾನರು ಹೊಡೆದುರುಳಿಸಿದ್ದಾರೆ.
ಬೆಂಗಳೂರು: ಜಮ್ಮುವಿನ ರಜೌರಿಯಲ್ಲಿ ಭಯೋತ್ಪಾದಕರ (terrorists) ಗುಂಪನ್ನು ಸದೆಬಡಿಯುವಾಗ ವೀರಮರಣವನ್ನಪ್ಪಿದ ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ (Captain MV Pranjal) ಅವರಿಗೆ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಲು (pay homage) ನಗರದ ಹೊರವಲಯ ಜಿಗಣಿಯಲ್ಲಿನ ನಂದನವನ ಲೇಔಟ್ ನಲ್ಲಿರುವ ಹುತಾತ್ಮ ನಿವಾಸದ ಬಳಿ ವ್ಯವಸ್ಥೆ ಮಾಡಲಾಗಿದ್ದು ಜನ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಸ್ಥಳದಲ್ಲಿ ಹಾಜರಿದ್ದು ವ್ಯವಸ್ಥೆಯನ್ನು ನೋಡಿಕೊಳ್ಳುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿ ಪ್ರಕಾರ ಪ್ರಜ್ವಲ್ ಪಾರ್ಥೀವ ಶರೀರ ಜಿಗಣಿ ರಸ್ತೆಯಿಂದ ಹೊರಟು ಕೊಪ್ಪ ಗೇಟ್, ಬನ್ನೇರುಘಟ್ಟ ಮತ್ತು ಕೂಡ್ಲು ಗೇಟ್ ಮೂಲಕ ಹಾದು ಸೋಮಸುಂದರ ವಿದ್ಯುತ್ ಚಿತಾಗಾರ ತಲುಪಲಿದ್ದು ಸಕಲ ಸರ್ಕಾರೀ ಮತ್ತು ಮಿಲಿಟರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ. ದೃಶ್ಯಗಳಲ್ಲಿ ಸೇನೆಯ ಅಧಿಕಾರಿಗಳು ಮತ್ತು ಜವಾನರು ಪ್ರಾಂಜಲ್ ಶರೀರವನ್ನು ಪೆಂಡಾಲ್ ನಲ್ಲಿ ತಂದಿರಿಸುತ್ತಿರುವುದನ್ನು ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ

ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ

ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
