ಕಾಂಗ್ರೆಸ್ ಪ್ರತಿಭಟನೆ ವೇಳೆ ಪೊಲೀಸರ ಎದುರೇ ಬಸ್ಗೆ ಕಲ್ಲು ತೂರಿದ್ದ ಮೂವರ ಬಂಧನ
ಮಂಗಳೂರು ಪಾಲಿಕೆ ಕಚೇರಿ ಮುಂಭಾಗ ರಸ್ತೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಿದ್ದು, ಈ ವೇಳೆ ಪೊಲೀಸ್ ಎದರಲ್ಲೇ ಖಾಸಗಿ ಬಸ್ಗೆ ಕಲ್ಲು ತೂರಿದ್ದ ಮೂವರು ಕಾರ್ಯಕರ್ತರನ್ನು ಬಂಧಿಸಿರುವಂತಹ ಘಟನೆ ನಡೆದಿದೆ. ಪ್ರತಿಭಟನೆ ವೇಳೆ ಬಸ್ ತಡೆದು ಗೂಂಡಾಗಿರಿ ನಡೆಸಿದ್ದಾರೆ.
ಮಂಗಳೂರು, ಆಗಸ್ಟ್ 19: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರವಾಗಿ ಇಂದು ಕರ್ನಾಟಕದಾದ್ಯಂತ ಕಾಂಗ್ರೆಸ್ (congress) ಕಾರ್ಯಕರ್ತರು ರೋಡಿಗಿಳಿದಿದ್ದಾರೆ. ಮಂಗಳೂರು ಪಾಲಿಕೆ ಕಚೇರಿ ಮುಂಭಾಗ ರಸ್ತೆಯಲ್ಲಿ ಪ್ರತಿಭಟನೆ ವೇಳೆ ಬಸ್ಗೆ ಕಲ್ಲು ತೂರಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರಪಾಲಿಕೆಯ ನಾಮನಿರ್ದೇಶಿತ ಸದಸ್ಯ ಕಿಶೋರ್ ಶೆಟ್ಟಿ ಹಾಗೂ ಕಾರ್ಯಕರ್ತರಾದ ಶಾಹುಲ್ ಹಮೀದ್, ಅನ್ವರ್ ಬಂಧಿತರು. ಪ್ರತಿಭಟನೆ ವೇಳೆ ಖಾಸಗಿ ಸಿಟಿ ಬಸ್ ತಡೆದು ಗೂಂಡಾಗಿರಿ ನಡೆಸಿದ್ದರು. ಈ ವೇಳೆ ಪೊಲೀಸರ ಎದುರೇ ಬಸ್ನ ಮುಂದಿನ ಗಾಜಿಗೆ ಕಲ್ಲುತೂರಿದ್ದಾರೆ. ಕಾಲಿನಿಂದ ಒದ್ದು ಗೂಂಡಾಗಿರಿ ಪ್ರದರ್ಶಿಸಿದ್ದಾರೆ. ಸದ್ಯ ಕಲ್ಲು ತೂರಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us