ಬೀದರ್​ನಲ್ಲಿ ಮೂರು ದಿನ ಪೆಟ್ರೋಲ್ ಬಂದ್ ವಂದತಿ; ಬಂಕ್​​ಗೆ ಮುಗಿಬಿದ್ದ ಜನ

Edited By: ಕಿರಣ್ ಹನುಮಂತ್​ ಮಾದಾರ್

Updated on: Jan 02, 2024 | 10:27 PM

ಮೂರು ದಿನ ಪೆಟ್ರೋಲ್(Petrol) ಬಂದ್ ಎನ್ನುವ ವಂದತಿ ಬೀದರ್(Bidar) ಜಿಲ್ಲೆಯಲ್ಲಿ ಹಬ್ಬಿದ್ದು, ಈ ಹಿನ್ನೆಲೆ ಪೆಟ್ರೋಲ್ ಮತ್ತು ಡಿಸೇಲ್​ ತುಂಬಿಸಲು ಬಂಕ್ ಮುಂದೆ ಜನ​ ಮುಗಿಬಿದ್ದ ಘಟನೆ ನಡೆದಿದೆ.

ಬೀದರ್, ಜ.02: ಮೂರು ದಿನ ಪೆಟ್ರೋಲ್(Petrol) ಬಂದ್ ಎನ್ನುವ ವಂದತಿ ಬೀದರ್(Bidar) ಜಿಲ್ಲೆಯಲ್ಲಿ ಹಬ್ಬಿದ್ದು, ಈ ಹಿನ್ನೆಲೆ ಪೆಟ್ರೋಲ್ ಮತ್ತು ಡಿಸೇಲ್​ ತುಂಬಿಸಲು ಬಂಕ್ ಮುಂದೆ ಜನ​ ಮುಗಿಬಿದ್ದ ಘಟನೆ ನಡೆದಿದೆ. ಹೌದು, ಜಿಲ್ಲೆಯ ಪ್ರತಿಯೊಂದು ತೈಲ ಬಂಕ್​ನಲ್ಲಿ ಜನರು ತಮ್ಮ ತಮ್ಮ ಬಳಿಯಿರುವ ಬೈಕ್​, ಕಾರು, ಟ್ರ್ಯಾಕ್ಟ್​ರ್​ ಸೇರಿದಂತೆ ಇನ್ನಿತರ ವಾಹನಗಳನ್ನು ತೆಗೆದುಕೊಂಡು ಜನ ಮುಗಿಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More