ಬಂಡೆಗೆ ಡಿಕ್ಕಿ ಹೊಡೆದ ನಾಡದೋಣಿ ಮುಳುಗಡೆ.. ಮೂವರು ಮೀನುಗಾರರು ನಾಪತ್ತೆ

[lazy-load-videos-and-sticky-control id=”Um69bEmrXHI”] ಉಡುಪಿ: ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ನಾಡದೋಣಿಯೊಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಂದಾಪುರ ತಾಲೂಕಿನ ಕಿರಿಮಂಜೇಶ್ವರ ಸಮೀಪದ ಕೊಡೆರಿ ಬಳಿ ಹತ್ತು ಜನರ ತಂಡ ಮೀನುಗಾರಿಕೆಂದು ತೆರಳಿತ್ತು.  ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ಅಲೆಗಳ ರಭಸ ಹೆಚ್ಚಾಗಿದ್ದರಿಂದ ಸಾಗರಶ್ರೀ ಎಂಬ ನಾಡದೋಣಿ ಬಂಡೆಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ದೋಣಿ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, 10 ಜನ ಮೀನುಗಾರರ ಪೈಕಿ ಮೂವರು ನಾಪತ್ತೆಯಾಗಿದ್ದಾರೆ. ಕುಂದಾಪುರ […]

ಬಂಡೆಗೆ ಡಿಕ್ಕಿ ಹೊಡೆದ ನಾಡದೋಣಿ ಮುಳುಗಡೆ.. ಮೂವರು ಮೀನುಗಾರರು ನಾಪತ್ತೆ
ಸಾಧು ಶ್ರೀನಾಥ್​

Updated on: Aug 17, 2020 | 10:38 AM

[lazy-load-videos-and-sticky-control id=”Um69bEmrXHI”]

ಉಡುಪಿ: ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ನಾಡದೋಣಿಯೊಂದು ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕುಂದಾಪುರ ತಾಲೂಕಿನ ಕಿರಿಮಂಜೇಶ್ವರ ಸಮೀಪದ ಕೊಡೆರಿ ಬಳಿ ಹತ್ತು ಜನರ ತಂಡ ಮೀನುಗಾರಿಕೆಂದು ತೆರಳಿತ್ತು.  ಮೀನು ಹಿಡಿದು ವಾಪಸಾಗುತ್ತಿದ್ದ ವೇಳೆ ಅಲೆಗಳ ರಭಸ ಹೆಚ್ಚಾಗಿದ್ದರಿಂದ ಸಾಗರಶ್ರೀ ಎಂಬ ನಾಡದೋಣಿ ಬಂಡೆಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮವಾಗಿ ದೋಣಿ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, 10 ಜನ ಮೀನುಗಾರರ ಪೈಕಿ ಮೂವರು ನಾಪತ್ತೆಯಾಗಿದ್ದಾರೆ. ಕುಂದಾಪುರ ತಾಲೂಕಿನ ಗಂಗೊಳ್ಳಿ ಕರಾವಳಿ ಕಾವಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ನಾಪತ್ತೆಯಾಗಿರುವ ಮೀನುಗಾರರಿಗೋಸ್ಕರ ಹುಡುಕಾಟ ಶುರುವಾಗಿದೆ.

Published On - 5:54 pm, Sun, 16 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us