ಲಂಚ ಸ್ವೀಕರಿಸುತ್ತಿದ್ದ ಬಳ್ಳಾರಿ ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ

ಅರುಣ್​ ಕುಮಾರ್​ ಬೆಳ್ಳಿ

Updated on: Feb 09, 2023 | 7:13 PM

ಪುರಾತತ್ವ ಇಲಾಖೆಯಿಂದ ಎನ್ ಓ ಸಿ ನೀಡಲು ಅಧಿಕಾರಿಗಳು ರೂ. 1,50,000 ಗಳಿಗೆ ಬೇಡಿಕೆಯಿಟ್ಟಿದ್ದರು ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ್ ಮುಲಾಲಿ ಕೇಂದ್ರ ತನಿಖಾ ದಳಕ್ಕೆ ದೂರು ನೀಡಿದ್ದರು.

ಬಳ್ಳಾರಿ: ಭ್ರಷ್ಟಾಚಾರ (corruption) ನಮ್ಮ ವ್ಯವಸ್ಥೆಯಲ್ಲಿ ಅದೆಷ್ಟು ಆಳವಾಗಿ ಬೇರೂರಿದೆಯೆಂದರೆ ಅದನ್ನು ಕಿತ್ತೊಗೆಯುವುದು ಅಸಾಧ್ಯವೆನಿಸುತ್ತದೆ ಮಾರಾಯ್ರೇ. ಪುರಾತತ್ವ ಇಲಾಖೆ (Archeological department) ಕೇಂದ್ರ ಸರ್ಕಾರದ ಅಧೀನಕೊಳ್ಳಪಡುತ್ತದೆ. ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಲಂಚ ತೆಗೆದುಕೊಳ್ಳುವುದಿಲ್ಲ ಎಂಬ ಭಾವನೆ ಜನಸಾಮಾನ್ಯರಲ್ಲಿದೆ. ಆದರೆ ಬಳ್ಳಾರಿಯಲ್ಲಿ ಪುರಾತತ್ವ ಇಲಾಖೆ ಕಚೇರಿಯ ಮುವರು ಅಧಿಕಾರಿಗಳು ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳನ್ನು ಪ್ರಶಾಂತ್ ರೆಡ್ಡಿ (Prashant Reddy), ಯೋಗೀಶ್ (Yogeesh), ಮೊಹ್ಮದ್ ಗೌಸ್ (Mohmmad Ghouse) ಎಂದು ಗುರುತಿಸಲಾಗಿದೆ. ಪುರಾತತ್ವ ಇಲಾಖೆಯಿಂದ ಎನ್ ಓ ಸಿ ನೀಡಲು ಅಧಿಕಾರಿಗಳು ರೂ. 1,50,000 ಗಳಿಗೆ ಬೇಡಿಕೆಯಿಟ್ಟಿದ್ದರು ಎಂದು ಸಾಮಾಜಿಕ ಹೋರಾಟಗಾರ ರಾಜಶೇಖರ್ ಮುಲಾಲಿ ಕೇಂದ್ರ ತನಿಖಾ ದಳಕ್ಕೆ ದೂರು ನೀಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 09, 2023 07:12 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.