ಹೆದ್ದಾರಿಯಲ್ಲಿ ವಸೂಲಿಗೆ ನಿಂತ ಪೊಲೀಸರು ಜನರಿಂದ ತರಾಟೆಗೊಳಗಾದ ಬಳಿಕ ಇಲಾಖೆಯಿಂದ ಅಮಾನತು ಆದೇಶ!

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Jun 09, 2023 | 11:37 AM

ವಿಡಿಯೋ ಅವರ ಮೇಲಧಿಕಾರಿಗಳಿಗೆ ತಲುಪಿದಾಗ ಎಎಸ್ ಐ ಮತ್ತು ಪೇದೆಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ತುಮಕೂರು: ಶಿರಾ-ತುಮಕೂರು (Sira-Tumakuru) ನಡುವೆ ಓಡಾಡುತ್ತಿದ್ದ ವಾಹನ ಚಾಲಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದ ಒಬ್ಬ ಎಎಸ್ ಐ (ASI) ಮತ್ತು ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳಿಗೆ ಡಬಲ್ ಡೋಸ್ ಟ್ರೀಟ್ ಮೆಂಟ್ ಸಿಕ್ಕಿದೆ. ಕುರಿ ಸಾಗಿಸುತ್ತಿದ್ದ ಲಾರಿಯೊಂದನ್ನು (truck) ಅಡ್ಡಗಟ್ಟಿ ವಸೂಲಿಗೆ ನಿಂತ ಈ ಪೊಲೀಸರನ್ನು ಮೊದಲು ಜನ ತರಾಟೆಗೆ ತೆಗೆದುಕೊಂಡಿದ್ದಾರೆ. ಕುರಿಸಾಗಣೆ ಮಾಡುತ್ತಿದ್ದವರಲ್ಲಿ ನಿಯಮಬದ್ಧ ಕಾಗದಪತ್ರಗಳಿದ್ದರೂ ಹಣ ಯಾಕೆ ಕೇಳತ್ತಿದ್ದೀರಿ ಅಂತ ಜನ ದಬಾಯಿಸಿದಾಗ ಪೊಲೀಸರು ಪೆ ಪೆ ಪೆ ಮಾಡಿದ್ದಾರೆ. ಆಮೇಲೆ ಈ ವಿಡಿಯೋ ಅವರ ಮೇಲಧಿಕಾರಿಗಳಿಗೆ ತಲುಪಿದಾಗ ಎಎಸ್ ಐ ಮತ್ತು ಪೇದೆಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ. ಮಾಡಿದ್ದುಣ್ಣೋ ಮಹಾರಾಯ…

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 09, 2023 11:33 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.