ಒಂದೇ ಆಧಾರ್ ಕಾರ್ಡ್ನಲ್ಲಿ ಮೂವರ ಪ್ರಯಾಣ: ಸಿಕ್ಕಿ ಬಿದ್ದ ಬುರ್ಖಾ ಧರಿಸಿದ್ದ ಮಹಿಳೆಯರು
ಮಹಿಳೆಯರಿಗೆ ಅನುಕೂಲವಾಗಲೆಂದು ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಶಕ್ತಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಿಂದ ಮಹಿಳೆಯರು ರಾಜ್ಯಾದ್ಯಂತ ಕೆಎಸ್ಆರ್ಟಿಸಿ ಬಸ್ನಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಕಂಡಕ್ಟರ್ಗೆ ಆಧಾರ್ ಕಾರ್ಡ್ ತೋರಿಸುವುದು ಕಡ್ಡಾಯವಾಗಿದೆ. ಆದ್ರೆ, ಬಾಗಕೋಟೆಯಲ್ಲಿ ಬುರ್ಖಾ ಧರಿಸಿದ್ದ ಮೂವರು ಮಹಿಳೆಯರು ಒಂದೇ ಆಧಾರ್ ತೋರಿಸಿ ಫ್ರೀ ಟಿಕೆಟ್ ಪಡೆದುಕೊಂಡಿದ್ದಾರೆ. ಬಳಿಕ ಟಿಸಿ ಕೈಗೆ ಸಿಕ್ಕಿಬಿದ್ದಿದ್ದಾರೆ.
ಬಾಗಲಕೋಟೆ, (ಅಕ್ಟೋಬರ್ 21): ಒಂದೇ ಆಧಾರ್ ಕಾರ್ಡ್ ತೋರಿಸಿ ಮೂವರು ಪ್ರಯಾಣಿಸುತ್ತಿದ್ದ ಮಹಿಳೆಯರು ಟಿಸಿ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಬಳಿ ಘಟನೆ ನಡೆದಿದೆ. ಬಾಗಲಕೋಟೆಯಿಂದ ಬೆಳಗಾವಿಗೆ ಹೊರಟಿದ್ದ ಮೂವರು ಬುರ್ಖಾ ಧರಿಸಿದ್ದ ಮಹಿಳೆರು ಒಂದೇ ಒಂದೇ ಆಧಾರ್ ಕಾರ್ಡ್ ತೋರಿಸಿ ಬಸ್ ಟಿಕೆಟ್ ಪಡೆದುಕೊಂಡಿದ್ದಾರೆ. ಬಳಿಕ ಮಾರ್ಗ ಮಧ್ಯ ಟಿಸಿ ಟಿಕೆಟ್ ತಪಾಸಣೆ ಮಾಡುವಾಗ ಮೂವರು ಮಹಿಳೆಯರು ಒಂದೇ ಕಾರ್ಡ್ ತೋರಿಸಿದ್ದಾರೆ. ಇದರಿಂದ ಗರಂ ಆದ ಟಿಸಿ ಮಹಿಳೆಯರಿಗೆ ಕ್ಲಾಸ್ ತೆಗೆದುಕೊಂಡಿದ್ದು, 500 ರೂ. ದಂಡ ಪಾವತಿಸುವಂತೆ ಹೇಳಿದ್ದಾರೆ. ಇಲ್ಲದಿದ್ದರೇ ಮೂವರ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
Follow Us
Latest Videos
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ

