ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಸಿಕ್ಕಿ ಬಿದ್ದ ಬುರ್ಖಾ ಧರಿಸಿದ್ದ ಮಹಿಳೆಯರು

Edited By:

Updated on: Oct 21, 2024 | 5:57 PM

ಮಹಿಳೆಯರಿಗೆ ಅನುಕೂಲವಾಗಲೆಂದು ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಶಕ್ತಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಿಂದ ಮಹಿಳೆಯರು ರಾಜ್ಯಾದ್ಯಂತ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಕಂಡಕ್ಟರ್​ಗೆ ಆಧಾರ್ ಕಾರ್ಡ್​ ತೋರಿಸುವುದು ಕಡ್ಡಾಯವಾಗಿದೆ. ಆದ್ರೆ, ಬಾಗಕೋಟೆಯಲ್ಲಿ ಬುರ್ಖಾ ಧರಿಸಿದ್ದ ಮೂವರು ಮಹಿಳೆಯರು ಒಂದೇ ಆಧಾರ್​​ ತೋರಿಸಿ ಫ್ರೀ ಟಿಕೆಟ್ ಪಡೆದುಕೊಂಡಿದ್ದಾರೆ. ಬಳಿಕ ಟಿಸಿ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಾಗಲಕೋಟೆ, (ಅಕ್ಟೋಬರ್ 21): ಒಂದೇ ಆಧಾರ್​ ಕಾರ್ಡ್​ ತೋರಿಸಿ ಮೂವರು ಪ್ರಯಾಣಿಸುತ್ತಿದ್ದ ಮಹಿಳೆಯರು ಟಿಸಿ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಬಳಿ ಘಟನೆ ನಡೆದಿದೆ. ಬಾಗಲಕೋಟೆಯಿಂದ ಬೆಳಗಾವಿಗೆ ಹೊರಟಿದ್ದ ಮೂವರು ಬುರ್ಖಾ ಧರಿಸಿದ್ದ ಮಹಿಳೆರು ಒಂದೇ ಒಂದೇ ಆಧಾರ್ ಕಾರ್ಡ್​ ತೋರಿಸಿ ಬಸ್​ ಟಿಕೆಟ್​ ಪಡೆದುಕೊಂಡಿದ್ದಾರೆ. ಬಳಿಕ ಮಾರ್ಗ ಮಧ್ಯ ಟಿಸಿ ಟಿಕೆಟ್​ ​ತಪಾಸಣೆ ಮಾಡುವಾಗ ಮೂವರು ಮಹಿಳೆಯರು ಒಂದೇ ಕಾರ್ಡ್​ ತೋರಿಸಿದ್ದಾರೆ. ಇದರಿಂದ ಗರಂ ಆದ ಟಿಸಿ  ಮಹಿಳೆಯರಿಗೆ ಕ್ಲಾಸ್ ತೆಗೆದುಕೊಂಡಿದ್ದು, 500 ರೂ. ದಂಡ ಪಾವತಿಸುವಂತೆ ಹೇಳಿದ್ದಾರೆ. ಇಲ್ಲದಿದ್ದರೇ ಮೂವರ ವಿರುದ್ಧ ಪೊಲೀಸ್​ ಠಾಣೆಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More