ಶಕ್ತಿ ಯೋಜನೆ: ಒಂದೇ ಆಧಾರ್ ಕಾರ್ಡಲ್ಲಿ ಮೂವರು ಪ್ರಯಾಣಿಸಿ ಸಿಕ್ಹಾಕಿಕೊಂಡ ಮಹಿಳೆಯರು!

ಅರುಣ್​ ಕುಮಾರ್​ ಬೆಳ್ಳಿ

Updated on: Oct 21, 2024 | 6:13 PM

ಸರ್ಕಾರದ ಗ್ಯಾರಂಟಿ ಯೋಜನೆಗಳು ದುರುಪಯೋಗುವಾಗುತ್ತಿರೋದು, ಜನ ದುರ್ಬಳಕೆ ಮಾಡಿಕೊಳ್ಳುತ್ತಿರೋದು ಹೊಸತೇನಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರು ಬಸ್ಸಲ್ಲಿ ಉಚಿತವಾಗಿ ಪ್ರಯಾಣಿಸಬೇಕಾದರೆ ಗುರುತಿನ ಚೀಟಿಯಾಗಿ ಆಧಾರ್ ಕಾರ್ಡ್ ಕಂಡಕ್ಟರ್ ಗೆ ತೋರಿಸಿದರೆ ಸಾಕು, ಈ ಮಹಿಳೆಯರಲ್ಲಿ ಅದೂ ಕೂಡ ಇಲ್ಲ ಅಂದರೆ ಹೇಗೆ ಸ್ವಾಮಿ?

ಬಾಗಲಕೋಟೆ: ಇದು ಜಿಲ್ಲೆಯ ಲೋಕಾಪುರದಲ್ಲಿ ನಡೆದಿರುವ ಘಟನೆ. ವಿಷಯವೇನೆಂದರೆ, ಮೂವರು ಬುರ್ಖಾಧಾರಿ ಮಹಿಳೆಯರು ಒಂದೇ ಆಧಾರ್​ ಕಾರ್ಡ್​ ಬಳಸಿ ಕೆಎಸ್ಸಾರ್ಟಿಸಿ ಬಸ್ಸಲ್ಲಿ ಪ್ರಯಾಣ ಮಾಡುವಾಗ ಟಿಕೆಟ್ ಚೆಕ್ ಮಾಡುವ ಅಧಿಕಾರಿಯ ಕೈಯಲ್ಲಿ ಸಿಕ್ಹಾಕಿಕೊಂಡಿದ್ದಾರೆ. ಐದೈದು ನೂರು ರೂ ದಂಡ ಕಟ್ಟಿ ಇಲ್ಲದಿದ್ದರೆ ಪೊಲೀಸ್ ಸ್ಟೇಷನ್ ಗೆ ನಡೆಯಿರಿ ಎಂದು ಅಧಿಕಾರಿ ಹೇಳುತ್ತಿದ್ದಾರೆ. ನಮ್ಮಲ್ಲಿ ಅಷ್ಟೆಲ್ಲ ಹಣವಿಲ್ಲ ದಯವಿಟ್ಟು ಬಿಟ್ಟುಬಿಡಿ ಎಂದು ಮಹಿಳೆಯರು ಗೋಗರೆಯುತ್ತಿದ್ದಾರೆ. ಮಹಿಳೆಯರನ್ನು ಬಸ್ಸಿಂದ ಕೆಳಗಿಳಿಸಿದರೆಂಬ ಮಾಹಿತಿ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿಗ್ಯಾರಂಟಿ ಯೋಜನೆಯಿಂದ ಹಣ ಕೊರತೆ? ಮುರ್ಡೇಶ್ವರ, ಗೋಕರ್ಣದ ಲೈಫ್ ಗಾರ್ಡ್ಸ್​ಗಳಿಗೆ ಕೊಟ್ಟಿಲ್ಲ ಮೂಲ ಸಲಕರಣೆ     

Loading...
Unable to load recommendations.
Follow Us