Thunderstorm and rains in Belagavi: ಬೆಳಗಾವಿ ಜಿಲ್ಲೆಯ ಎರಡು ತಾಲ್ಲೂಕುಗಳಲ್ಲಿ ಆಲಿಕಲ್ಲು ಸಮೇತ ಭಾರೀ ಮಳೆ!

ಅರುಣ್​ ಕುಮಾರ್​ ಬೆಳ್ಳಿ

Updated on: May 30, 2023 | 6:49 PM

ಹಾಗೆಯೇ, ರಾಯಭಾಗ ತಾಲೂಕಿನ ಕುಡಚಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಮಳೆ ಧಾರಾಕಾರವಾಗಿ ಸುರಿದಿದೆ.       

ಬೆಳಗಾವಿ: ಅಕಾಲಿಕ ಮಳೆ ಕೇವಲ ಬೆಂಗಳೂರು, ಮೈಸೂರು ಮೊದಲಾದ ಕಡೆಗಳಲ್ಲಿ ಮಾತ್ರ ಆಗದೆ ಕಿತ್ತೂರು ಕರ್ನಾಟಕ ಭಾಗದಲ್ಲೂ (Kittur Karnataka region) ಆಗುತ್ತಿದೆ. ಈ ವಿಡಿಯೋ ನೋಡಿ. ಬೆಳಗಾವಿ ಜಿಲ್ಲೆಯ ಕಾಗವಾಡ (Kagwada) ಮತ್ತು ರಾಯಬಾಗ್ (Raibagh) ತಾಲ್ಲೂಕುಗಳಲ್ಲಿ ಇಂದು ಮಧ್ಯಾಹ್ನ ಬಿರುಗಾಳಿ ಸಮೇತ ಜೋರು ಮಳೆಯಾಗಿದೆ. ಎರಡೂ ಕಡೆಗಳಲ್ಲಿ ಆಲಿಕಲ್ಲು (hailstorm) ಸುರಿದ ಮಾಹಿತಿ ನಮಗೆ ಲಭ್ಯವಾಗಿದೆ ಮತ್ತು ಮೊಬೈಲ್ ಕೆಮೆರಾದಲ್ಲಿ ಶೂಟ್ ಮಾಡಿರುವ ವಿಡಿಯೋದಲ್ಲಿ ಆಲಿಕಲ್ಲು ಬೀಳುತ್ತಿರುವುದನ್ನು ನೋಡಬಹುದಾಗಿದೆ. ಕಾಗವಾಡ ತಾಲೂಕಿನ ಮೊಳೆ,‌ ಉಗಾರಖುರ್ದ್ ಮತ್ತು ಕಾಗವಾಡದಲ್ಲಿ ಭಾರಿ ಮಳೆಯಾಗಿದೆ. ಹಾಗೆಯೇ, ರಾಯಭಾಗ ತಾಲೂಕಿನ ಕುಡಚಿ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲೂ ಮಳೆ ಧಾರಾಕಾರವಾಗಿ ಸುರಿದಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.