AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rains damage crops: ವಿಜಯಪುರದಲ್ಲಿ ಜೋರು ಗಾಳಿ ಮತ್ತು ಮಳೆಗೆ ದಾಳಿಂಬೆ ಮತ್ತು ನಿಂಬೆ ಬೆಳೆ ನಾಶ, ರೈತರು ಕಂಗಾಲು

Rains damage crops: ವಿಜಯಪುರದಲ್ಲಿ ಜೋರು ಗಾಳಿ ಮತ್ತು ಮಳೆಗೆ ದಾಳಿಂಬೆ ಮತ್ತು ನಿಂಬೆ ಬೆಳೆ ನಾಶ, ರೈತರು ಕಂಗಾಲು

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 25, 2023 | 11:08 AM

Share

ನಾಶವಾಗಿರುವ ದಾಳಿಂಬೆ ಮತ್ತು ನಿಂಬೆ ಬೆಳೆಯನ್ನು ತೋಟಗಾರಿಕೆ ಬೆಳೆ ಎನ್ನಲಾಗಿದ್ದು ರೈತರು ಪರಿಹಾರಕ್ಕಾಗಿ ಸರ್ಕಾರದ ಮೊರೆಹೊಕ್ಕಿದ್ದಾರೆ.

ವಿಜಯಪುರ: ಮಳೆಯ ಆಟ ಗೊತ್ತು ಮಾಡಿಕೊಳ್ಳುವುದು ಕಷ್ಟವಾಗುತ್ತಿದೆ. ಮೊನ್ನೆ ರಾತ್ರಿ ಕೋಲಾರದಲ್ಲಿ (Kolar) ಸುರಿದ ಬಿರುಗಾಳಿ ಸಹಿತ ಮಳೆ, ಬೀನ್ಸ್ ಮತ್ತು ಮಾವಿನ ಫಸಲನ್ನು ನಾಶ ಮಾಡಿದ ವಿಡಿಯೋ ನಿಮಗೆ ತೋರಿಸಿದ್ದೇವೆ. ನಿನ್ನೆ ರಾತ್ರಿ ವಿಜಯಪುರದಲ್ಲಿ (Vijayapura) ಸುರಿದ ಧಾರಾಕಾರ ಮಳೆ ಮತ್ತು ಗಾಳಿ ದಾಳಿಂಬೆ (pomegranate) ಮತ್ತು ನಿಂಬೆಹಣ್ಣಿನ (lemon) ಗಿಡಗಳನ್ನು ನೆಲಕ್ಕುರಿಳಿಸಿ ಬೆಳೆನಾಶ ಮಾಡಿವೆ, ವಿಜಯಪುರ ತಾಲ್ಲೂಕಿನ ಆಹೇರಿ ಮತ್ತು ಜಂಬಗಿ ಗ್ರಾಮಗಳಲ್ಲಿನ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದು. ನಾಶವಾಗಿರುವ ದಾಳಿಂಬೆ ಮತ್ತು ನಿಂಬೆ ಬೆಳೆಯನ್ನು ತೋಟಗಾರಿಕೆ ಬೆಳೆ ಎನ್ನಲಾಗಿದ್ದು ರೈತರು ಪರಿಹಾರಕ್ಕಾಗಿ ಸರ್ಕಾರದ ಮೊರೆಹೊಕ್ಕಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.