Amit Shah in Karnataka: ಕಟೌಟ್ ಮತ್ತು ಫ್ಲೆಕ್ಸ್ ಗಳ ಮೂಲಕ ಅಮಿತ್ ಶಾ ಗಮನ ಸೆಳೆಯಲು ಪ್ರಯತ್ನಿಸುತ್ತಿರುವ ಟಿಕೆಟ್ ಆಕಾಂಕ್ಷಿಗಳು!
ಕೇಂದ್ರ ಸಚಿವ ಅವುಗಳನ್ನು ನೋಡುತ್ತಾರೋ, ನೋಡಿದರೂ ಅವರಿಗೆ ನಾಯಕರ ಹೆಸರುಗಳು ನೆನಪಿರುತ್ತವೋ ಅನ್ನೋದು ನಿಮ್ಮ ಊಹೆಗೆ ಬಿಟ್ಟ ವಿಚಾರ.
ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಮಧ್ಯಾಹ್ನ 3 ಗಂಟೆಗೆ ಬೆಳಗಾವಿ (Belagavi) ಜಿಲ್ಲೆಯ ಎಮ್ ಕೆ ಹುಬ್ಬಳ್ಳಿ ಗ್ರಾಮದಲ್ಲಿ ರಾಜ್ಯ ಬಿಜೆಪಿ ನಡೆಸುತ್ತಿರುವ ಜನಸಂಕಲ್ಪ ಯಾತ್ರೆಯ (Janasankalpa Yatre) ಬೃಹತ್ ಸಮಾವೇಶದಲ್ಲಿ ಮಾತಾಡಲಿದ್ದಾರೆ. ಇದು ಚುನಾವಣಾ ತಯಾರಿಯ ಭಾಗವಾಗಿರುವುದರಿಂದ ಈ ಭಾಗದ ಟಿಕೆಟ್ ಆಕಾಂಕ್ಷಿಗಳು ಅಮಿತ್ ಶಾ ಅವರಿಗೆ ಸ್ವಾಗತ ಕೋರುತ್ತಾ ದೊಡ್ಡ ದೊಡ್ಡ ಬ್ಯಾನರ್ ಗಳನ್ನು ಹಾಕಿಸಿದ್ದಾರೆ. ಜನಸಂಕಲ್ಪ ಯಾತ್ರೆಯಲ್ಲಿ ಬ್ಯಾನರ್, ಕಟೌಟ್ ಗಳ ಮೂಲಕ ಅಮಿತ್ ಶಾ ಅವರ ಗಮನ ಸೆಳೆಯುವ ಸಂಕಲ್ಪ ಈ ನಾಯಕರದ್ದು. ಕೇಂದ್ರ ಸಚಿವ ಅವುಗಳನ್ನು ನೋಡುತ್ತಾರೋ, ನೋಡಿದರೂ ಅವರಿಗೆ ನಾಯಕರ ಹೆಸರುಗಳು ನೆನಪಿರುತ್ತವೋ ಅನ್ನೋದು ನಿಮ್ಮ ಊಹೆಗೆ ಬಿಟ್ಟ ವಿಚಾರ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 28, 2023 12:02 PM
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
