Viral Video: ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ

Edited By:

Updated on: Nov 27, 2024 | 3:52 PM

ತಾಯಿಯೊಂದಿಗಿದ್ದ ಮರಿ ಆನೆಯನ್ನು ತಿನ್ನಲು ಹೊಂಚು ಹಾಕಿದ ಹುಲಿ ಕೊನೆಗೆ ತಾನೇ ಹೆದರಿ ಓಡಿಹೋಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಈ ಘಟನೆ ನಡೆದಿದೆ. ತಾಯಿಯೊಂದಿಗಿದ್ದ ಮರಿ ಆನೆಯನ್ನು ತಿನ್ನಲು ಹೊಂಚು ಹಾಕಿ ಕುಳಿತಿದ್ದ ಹುಲಿಯನ್ನು ತಾಯಿ ಆನೆ ಓಡಿಸಿದೆ. ಸಫಾರಿಗೆ ಬಂದಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ತಾಯಾನೆ ಹುಲಿಯನ್ನು ಓಡಿಸಿದ ದೃಶ್ಯ ಸೆರೆಯಾಗಿದೆ.

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ ಸಫಾರಿ ಮಾಡುವಾಗ ಪ್ರವಾಸಿಗರ ಕಣ್ಣಿಗೆ ಅಚ್ಚರಿಯ ದೃಶ್ಯವೊಂದು ಬಿದ್ದಿದೆ. ಈ ದೃಶ್ಯವನ್ನು ಅವರು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ತಾಯಿಯೊಂದಿಗೆ ತಿರುಗಾಡುತ್ತಿದ್ದ ಆನೆ ಮರಿಗೆ ಹೊಂಚು ಹಾಕಿ ಕುಳಿತಿದ್ದ ಹುಲಿರಾಯನಿಗೆ ತಾಯಾನೆ ಗ್ರಹಚಾರ ಬಿಡಿಸಿದೆ. ಬಂಡೀಪುರದಲ್ಲಿ ಬೇಟೆಗೆ ಹೊಂಚು ಹಾಕಿ ಕುಳಿತಿದ್ದ ಹುಲಿ ಬಳಿಕ ತಾಯಾನೆಗೆ ಹೆದರಿ ಎಸ್ಕೇಪ್ ಆಗಿದೆ. ತಾಯಿಯೊಂದಿಗೆ ಇದ್ದ ಮರಿ ಆನೆಯನ್ನು ತಿನ್ನಲು ಕಾದು ಕುಳಿತಿದ್ದ ಹುಲಿಯ ಹೊಂಚು ಗಮನಿಸಿ ತಾಯಿ ಆನೆ ಆ ಹುಲಿಯನ್ನು ಓಡಿಸಿದೆ. ಆನೆ ಹುಲಿ ಮೇಲೆ ಎಗರಿ ಓಡಿಸಿದ ವೀಡಿಯೋ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More