ನಾಳೆ ಹಾಸನದಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಜನಕಲ್ಯಾಣ ಸಮಾವೇಶಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್
ಸಮಾವೇಶದಲ್ಲಿ ಪಾಲ್ಗೊಳ್ಳಲು ಹಾಸನವಲ್ಲದೆ ಚಾಮರಾಜನಗರ, ಮೈಸೂರು, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಿಂದ ಜನ ಮತ್ತು ಕಾರ್ಯಕರ್ತರು ಅಗಮಿಸುತ್ತಿದ್ದಾರೆ. ಹಾಸನ ಯಾವತ್ತಿಗೂ ಜೆಡಿಎಸ್ ಭದ್ರಕೋಟೆ ಎನಿಸಿಕೊಂಡಿತ್ತು, ಅದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶ್ರೇಯಸ್ ಪಟೇಲ್ ಸಂಸದರಾಗಿ ಅಯ್ಕೆಯಾದರು.
ಹಾಸನ: ನಗರದ ಎಸ್ಎಂ ಕೃಷ್ಣ ಕ್ರೀಡಾಂಗಣದಲ್ಲಿ ನಾಳೆ ಕಾಂಗ್ರೆಸ್ ಪಕ್ಷದ ಬೃಹತ್ ಜನಕಲ್ಯಾಣ ಸಮಾವೇಶ ನಡೆಯಲಿದ್ದು ಅಂತಿಮ ಹಂತದ ತಯಾರಿಗಳು ನಡೆಯುತ್ತಿವೆ. ಸರಕಾರದ ಪ್ರಮುಖ ಪ್ರತಿನಿಧಿಗಳೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಮತ್ತು ಸುಮಾರು 2 ಲಕ್ಷ ಜನ ಕೂಡ ಸೇರುವ ನಿರೀಕ್ಷೆಯಿದೆ ಎಂದು ನಮ್ಮ ವರದಿಗಾರ ಹೇಳುತ್ತಾರೆ. ಭದ್ರತೆಗಾಗಿ 5 ಎಸ್ಪಿ, 6 ಹೆಚ್ಚುವರಿ ಎಸ್ಪಿ, 12 ಡಿವೈಎಸ್ಪಿ, 40 ಇನ್ಪೆಕ್ಟರ್ ಮತ್ತು 80 ಪಿಎಸ್ಐಗಳನ್ನು ಒಳಗೊಂಡ ಸುಮಾರು 2,000 ಪೊಲೀಸರನ್ನು ನಿಯೋಜಿಸಲಾಗಿದೆ. ಪಕ್ಕದ ಜಿಲ್ಲೆಗಳಾದ ಮಂಡ್ಯ, ಮೈಸೂರು ಕೊಡಗು ಜಿಲ್ಲೆಗಳಿಂದ ಹೆಚ್ಚಿನ ಪೊಲೀಸ್ ಬಲವನ್ನು ತರಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಹಾಸನ ಕಾಂಗ್ರೆಸ್ ಕಾರ್ಯಕ್ರಮದ ದಿಕ್ಕೇ ಬದಲು: ಸ್ವಾಭಿಮಾನಿ ಅಲ್ಲ ಜನಕಲ್ಯಾಣ ಸಮಾವೇಶ ಎಂದ ಡಿಕೆ ಶಿವಕುಮಾರ್
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
