AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಶ ಆಗಬೇಕಂದ್ರೆ ಟಿಪ್ಪು ಜಯಂತಿ ಪ್ರಾರಂಭಿಸಲಿ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಸನಗೌಡ ಯತ್ನಾಳ್ ಗರಂ

ನಾಶ ಆಗಬೇಕಂದ್ರೆ ಟಿಪ್ಪು ಜಯಂತಿ ಪ್ರಾರಂಭಿಸಲಿ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಸನಗೌಡ ಯತ್ನಾಳ್ ಗರಂ

ಕಿರಣ್​ ಹನಿಯಡ್ಕ
| Updated By: Ganapathi Sharma|

Updated on: Dec 09, 2025 | 12:16 PM

Share

ಬಸನಗೌಡ ಪಾಟೀಲ್ ಯತ್ನಾಳ್ ಅವರು ದ್ವೇಷ ಭಾಷಣ ವಿಧೇಯಕ, ಗೋಹತ್ಯೆ ನಿಷೇಧ ಕಾಯ್ದೆ ಸಡಿಲೀಕರಣ ಮತ್ತು ಟಿಪ್ಪು ಜಯಂತಿ ಪುನರಾರಂಭದ ಕುರಿತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಚೋದನಕಾರಿ ಭಾಷಣಕ್ಕೆ ಸರ್ಕಾರವೇ ಹೊಣೆ ಎಂದು ಆರೋಪಿಸಿ, ಟಿಪ್ಪು ಜಯಂತಿ ಪುನರಾರಂಭ ವಿರೋಧಿಸಿ ಚುನಾವಣಾ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದರು.

ಬೆಳಗಾವಿ, ಡಿಸೆಂಬರ್ 9: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ವಿಚಾರಗಳ ಕುರಿತು ವಾಗ್ದಾಳಿ ನಡೆಸಿದ್ದಾರೆ. ದ್ವೇಷ ಭಾಷಣವನ್ನು ವಿರೋಧಿಸುವ ವಿಧೇಯಕವನ್ನು ಜಾರಿಗೆ ತರುವ ಸರ್ಕಾರದ ನಿರ್ಧಾರವನ್ನು ಅವರು ಪ್ರಶ್ನಿಸಿದ್ದಾರೆ. ಹೈದರಾಬಾದ್‌ನ ಓವೈಸಿ ಮತ್ತು ದೆಹಲಿಯ ಇಮಾಮ್‌ನಂತಹವರ ಪ್ರಚೋದನಕಾರಿ ಭಾಷಣಗಳಿಂದ ದ್ವೇಷ ಭಾಷಣ ಪ್ರಾರಂಭವಾಗಿದ್ದು, ಇದಕ್ಕೆ ಹಿಂದೂಗಳು ಪ್ರತಿಕ್ರಿಯಿಸುವುದು ಅನಿವಾರ್ಯ ಎಂದು ಯತ್ನಾಳ್ ಹೇಳಿದ್ದಾರೆ. ಹಿಂದೂ ವಿರೋಧಿ ಕಾನೂನುಗಳನ್ನು ರಚಿಸಲಾಗುತ್ತಿದೆ ಎಂದು ಆರೋಪಿಸಿ, ಗೋಹತ್ಯೆ ನಿಷೇಧ ಕಾಯ್ದೆಯ ಸಡಿಲಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಟಿಪ್ಪು ಸುಲ್ತಾನ್ ಜಯಂತಿಯನ್ನು ಪುನರಾರಂಭ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸುವ ಸಿದ್ಧತೆ ಕುರಿತು ಪ್ರತಿಕ್ರಿಯಿಸಿದ ಯತ್ನಾಳ್, ಕಾಂಗ್ರೆಸ್ ಟಿಪ್ಪುವನ್ನು ಬೆಂಬಲಿಸಿದಾಗಲೆಲ್ಲಾ ನಾಶವಾಗಿದೆ. ಪುನಃ ನಾಶವಾಗಬೇಕಿದ್ದರೆ ಟಿಪ್ಪು ಜಯಂತಿಯನ್ನು ಪ್ರಾರಂಭಿಸಲಿ ಎಂದು ಸವಾಲು ಹಾಕಿದ್ದಾರೆ. ಉತ್ತರ ಕರ್ನಾಟಕದ ವಿಷಯಗಳ ಚರ್ಚೆಗೆ ಅಧಿವೇಶನದಲ್ಲಿ ಅವಕಾಶ ನೀಡುವ ಸರ್ಕಾರದ ನಿರ್ಧಾರವನ್ನು ಯತ್ನಾಳ್ ಸ್ವಾಗತಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ