ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್

ವಿವೇಕ ಬಿರಾದಾರ

Updated on: May 13, 2025 | 2:38 PM

ಕೇಂದ್ರ ಸರ್ಕಾರದ ಆದೇಶದಂತೆ, ರಾಷ್ಟ್ರೀಯ ಏಕತೆಯ ಸಂಕೇತವಾಗಿ ಕರ್ನಾಟಕದಲ್ಲಿ ತಿರಂಗಾ ಯಾತ್ರೆ ಆಯೋಜಿಸಲಾಗಿದೆ. ಮೇ 15 ರಿಂದ 23 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಈ ಯಾತ್ರೆ ನಡೆಯಲಿದೆ. ಬೆಂಗಳೂರಿನಲ್ಲಿ ಮೇ 15 ರಂದು ಮಲ್ಲೇಶ್ವರದಿಂದ 18 ನೇ ಕ್ರಾಸ್ ವರೆಗೆ ಯಾತ್ರೆ ನಡೆಯಲಿದೆ. ಯಾವುದೇ ರಾಜಕೀಯ ಪಕ್ಷದ ಧ್ವಜಗಳ ಬಳಕೆಗೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ. ಸೇನಾಪಡೆಗಳಿಗೆ ಬೆಂಬಲ ವ್ಯಕ್ತಪಡಿಸುವುದು ಈ ಯಾತ್ರೆಯ ಮುಖ್ಯ ಉದ್ದೇಶ.

ಬೆಂಗಳೂರು, ಮೇ 13: ರಾಷ್ಟ್ರ ರಕ್ಷಣೆಗಾಗಿ ನಾಗರಿಕರ ಹೆಸರಿನಲ್ಲಿ ದೇಶಾದ್ಯಂತ ಯಾವುದೇ ಪಕ್ಷಭೇದವಿಲ್ಲದೆ ತಿರಂಗಾ ಯಾತ್ರೆ ಮಾಡಬೇಕೆಂಬುದು ಕೇಂದ್ರ ಸರ್ಕಾರ ಹೇಳಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್​.ಅಶೋಕ್ ತಿಳಿಸಿದರು. ಸೇನಾಪಡೆಗಳ ಜೊತೆ ನಿಂತು ಬಲ ತುಂಬುವುದು ತಿರಂಗಾ ಯಾತ್ರೆಯ ಉದ್ದೇಶವಾಗಿದೆ. ಹೀಗಾಗಿ, ರಾಜ್ಯದಲ್ಲಿ ಕೂಡ ದೊಡ್ಡಮಟ್ಟದಲ್ಲಿ ತಿರಂಗಾ ಯಾತ್ರೆ ಮಾಡುತ್ತಿದ್ದೇವೆ. ಮೇ 15ರಂದು ಬೆಂಗಳೂರಿನಲ್ಲಿ ತಿರಂಗಾ ಯಾತ್ರೆ ಮಾಡುತ್ತೇವೆ. ಮಲ್ಲೇಶ್ವರಂನ ಶಿರೂರು ಪಾರ್ಕ್​ನಿಂದ 18ನೇ ಕ್ರಾಸ್​ವರೆಗೆ ತಿರಂಗಾ ಯಾತ್ರೆ ಮಾಡುತ್ತೇವೆ. ಮೇ 16, 17ರಂದು ಜಿಲ್ಲಾ ಕೇಂದ್ರಗಳಲ್ಲಿ ತಿರಂಗಾ ಯಾತ್ರೆ ನಡೆಯಲಿದೆ. ಮೇ 18ರಿಂದ 23ರವರೆಗೆ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ತಿರಂಗಾ ಯಾತ್ರೆಯಲ್ಲಿ ಯಾವುದೇ ಪಕ್ಷದ ಧ್ವಜ ಬಳಕೆ ಮಾಡಲ್ಲ ಎಂದು ಹೇಳಿದರು.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.