ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಜಮೀರ್ ಅಹಮ್ಮದ್​ಗೆ ಸಂಕಷ್ಟ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್​ ಮತ್ತು ಜನಪ್ರತಿನಿಧಿಗಳ ಕೋರ್ಟ್​ ತನಿಖೆಗೆ ಆದೇಶಿಸಿವೆ. ಇನ್ನು ಇತ್ತ ಸಚಿವ ಜಮೀರ್ ಅಹಮ್ಮದ್ ಖಾನ್ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡುವ ಭರದಲ್ಲಿ ಹೈಕೋರ್ಟ್​ ಆದೇಶದ ಬಗ್ಗೆ ಕೇವಲವಾಗಿ ಮಾತನಾಡಿದ್ದು, ಇದೀಗ ಅವರಿಗೆ ಸಂಕಷ್ಟ ತಂದಿಟ್ಟಿದೆ.

ಮುಡಾ ಕೇಸ್:  ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಜಮೀರ್ ಅಹಮ್ಮದ್​ಗೆ ಸಂಕಷ್ಟ
|

Updated on: Sep 26, 2024 | 6:19 PM

ಉಡುಪಿ, (ಸೆಪ್ಟೆಂಬರ್ 26): ಮುಡಾ ಪ್ರಕರಣದಲ್ಲಿ (MUDA Case) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಹೈಕೋರ್ಟ್ (High Court) ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ತೀರ್ಪಿನ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಹಗುರವಾಗಿ ಮಾತನಾಡಿದ್ದಾರೆ. ಹೈಕೋರ್ಟ್ ರಾಜ್ಯಪಾಲರ ನಿರ್ಧಾರ ಎತ್ತಿಹಿಡಿದು ತನಿಖೆಗೆ ಆದೇಶಿಸಿದ್ದು ರಾಜಕೀಯ ತೀರ್ಪು ಎಂದು ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಇದು ಇದೀಗ ಜಮೀರ್​​ ಅಹಮ್ಮದ್ ಖಾನ್​ಗೆ ಸಂಕಷ್ಟ ತಂದೊಡ್ಡಿದೆ. ಹೌದು….ಈ ಸಂಬಂಧ ಬಿಜೆಪಿ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಕಿಡಿಕಾರಿದೆ. ಅಲ್ಲದೇ ಈ ಬಗ್ಗೆ ಕಾನೂನು ಹೋರಾಟಕ್ಕೆ ಟಿಜೆ ಅಬ್ರಹಾಂ ನಿರ್ಧರಿಸಿದ್ದಾರೆ.

ಉಡುಪಿಯಲ್ಲಿ ಇಂದು(ಸೆಪ್ಟೆಂಬರ್ 26) ಸುದ್ದಿಗಾರರೊಂದಿಗೆ ಮಾತನಾಡಿದ ಮುಡಾ ಪ್ರಕರಣದ ದೂರುದಾರರಲ್ಲೊಬ್ಬರಾದ, ಹಿರಿಯ ವಕೀಲ ಟಿಜೆ ಅಬ್ರಹಾಂ (TJ Abraham), ನ್ಯಾಯಾಲಯದ ತೀರ್ಪಿನ ಬಗ್ಗೆ ಮಾತನಾಡುವುದು ಎಂದರೆ ಹುಡುಗಾಟನಾ. ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಸ್ಪಷ್ಟಪಡಿಸಿದರು.

ರಾಜಕಾರಣದಲ್ಲಿ ಭಾಷಣ ಬಿಗಿದ ಹಾಗೆ ಮಾತನಾಡಿದರೆ ಆಗುತ್ತಾ? ನಾಲಿಗೆ ಬಿಗಿಯಿಲ್ಲದೆ ಮಾತನಾಡಿದ್ದು ಸರಿಯಲ್ಲ. ಈ ತೀರ್ಪನ್ನು ಪೊಲಿಟಿಕಲ್ ಆದೇಶ ಎಂದು ಹೇಳುತ್ತಾರೆ. ನ್ಯಾಯಾಧೀಶರನ್ನು ರಾಜಕಾರಣಿಗಳ ಲೆವೆಲ್ಲಿಗೆ ಇಳಿಸುತ್ತೀರಾ? ನ್ಯಾಯಾಲಯ ದ ಬಗ್ಗೆ ಭಯ ಭಕ್ತಿ ಬೇಡ್ವಾ. ಯಾರ ಬಗ್ಗೆ ಮಾತನಾಡುತ್ತಿದ್ದೀರಿ ಗೊತ್ತಿದೆಯಾ. ನನ್ನ ಬಗ್ಗೆ ಮಾತನಾಡಿ ಪರ್ವಾಗಿಲ್ಲ. ನ್ಯಾಯಾಲಯದ ಬಗ್ಗೆ ಎಷ್ಟು ಕ್ಯಾಶುಯಲ್ ಆಗಿ ಮಾತಾಡ್ತೀರಾ. ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow us
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಜೈಲಿಗೆ ಬಂದ ಅಧಿಕಾರಿಗಳು, ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್
ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಗ್ರಾಮಸ್ಥರ ಭಾರೀ ಮೆಚ್ಚುಗೆ
ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಕಾರ್ಯಕ್ಕೆ ಗ್ರಾಮಸ್ಥರ ಭಾರೀ ಮೆಚ್ಚುಗೆ
‘ಬಿಗ್ ಬಾಸ್’ ಅನುಭವ ತೆರೆದಿಟ್ಟ ಮೊದಲ ಸೀಸನ್ ವಿನ್ನರ್ ವಿಜಯ್ ರಾಘವೇಂದ್ರ
‘ಬಿಗ್ ಬಾಸ್’ ಅನುಭವ ತೆರೆದಿಟ್ಟ ಮೊದಲ ಸೀಸನ್ ವಿನ್ನರ್ ವಿಜಯ್ ರಾಘವೇಂದ್ರ