ಅಪರಾಧ ಕೃತ್ಯಗಳು ಕಡಿಮೆ ಆಗಲಿ ಎಂದು ಪೊಲೀಸರಿಂದ ಹೋಮ ಹವನ
ಅಪರಾಧ ಕೃತ್ಯಗಳು ಕಡಿಮೆ ಆಗಲಿ ಅಂತ ಬೆಳಗಾವಿಯ ಮಾಳಮಾರುತಿ ಪೊಲೀಸರು ಠಾಣೆಯಲ್ಲಿ ಹೋಮ-ಹವನ ಮಾಡಿಸಿದ್ದಾರೆ. ಠಾಣೆ ಬಾಗಿಲಿಗೆ ಬುದಗುಂಬಳಕಾಯಿ ಒಡೆದು ಅರಿಶಿನ ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದ್ದಾರೆ.
ಬೆಳಗಾವಿ, ನವೆಂಬರ್ 29: ಅಪರಾಧ ಕೃತ್ಯಗಳು ಕಡಿಮೆ ಆಗಲಿ ಅಂತ ಬೆಳಗಾವಿಯ ಮಾಳಮಾರುತಿ ಪೊಲೀಸರು ಠಾಣೆಯಲ್ಲಿ ಹೋಮ-ಹವನ ಮಾಡಿಸಿದ್ದಾರೆ. ಠಾಣೆ ಬಾಗಿಲಿಗೆ ಬುದಗುಂಬಳಕಾಯಿ ಒಡೆದು ಅರಿಶಿನ ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದ್ದಾರೆ. ಕಳೆದ ಒಂದೂವರೆ ತಿಂಗಳಲ್ಲಿ ಈ ಠಾಣೆಯಲ್ಲಿ ಕೊಲೆ ಸುಲಿಗೆ, ದರೋಡೆ, ಕಳ್ಳತನ ಸೇರಿದಂತೆ ಸುಮಾರು 45ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಕಳೆದ ವಾರ ಮಹಿಳೆಯೊಬ್ಬಳ ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ ಅಮಾನವೀಯ ಘಟನೆ ನಡೆದಿತ್ತು. ಇದೇ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿಗಾಗಿ ಗುಂಡಿನ ಸದ್ದು ಕೇಳಿ ಬಂದಿತ್ತು. ಈ ಎಲ್ಲ ಪ್ರಕರಣಗಳು ಇದೇ ಠಾಣೆಯಲ್ಲಿ ದಾಖಲಾಗಿವೆ. ಹೀಗಾಗಿ, ಅಪರಾಧ ನಿಯಂತ್ರಿಸಲು ಸಾಕಷ್ಟು ಪ್ರಯತ್ನ ಮಾಡಿದರೂ ಪ್ರಯೋಜನ ಆಗದ ಹಿನ್ನೆಲೆಯಲ್ಲಿ ಪೊಲೀಸರು ದೇವರ ಮೊರೆ ಹೋಗಿದ್ದಾರೆ.
Latest Videos
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
