ಅಪರಾಧ ಕೃತ್ಯಗಳು ಕಡಿಮೆ ಆಗಲಿ ಎಂದು ಪೊಲೀಸರಿಂದ ಹೋಮ ಹವನ
ಅಪರಾಧ ಕೃತ್ಯಗಳು ಕಡಿಮೆ ಆಗಲಿ ಅಂತ ಬೆಳಗಾವಿಯ ಮಾಳಮಾರುತಿ ಪೊಲೀಸರು ಠಾಣೆಯಲ್ಲಿ ಹೋಮ-ಹವನ ಮಾಡಿಸಿದ್ದಾರೆ. ಠಾಣೆ ಬಾಗಿಲಿಗೆ ಬುದಗುಂಬಳಕಾಯಿ ಒಡೆದು ಅರಿಶಿನ ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದ್ದಾರೆ.
ಬೆಳಗಾವಿ, ನವೆಂಬರ್ 29: ಅಪರಾಧ ಕೃತ್ಯಗಳು ಕಡಿಮೆ ಆಗಲಿ ಅಂತ ಬೆಳಗಾವಿಯ ಮಾಳಮಾರುತಿ ಪೊಲೀಸರು ಠಾಣೆಯಲ್ಲಿ ಹೋಮ-ಹವನ ಮಾಡಿಸಿದ್ದಾರೆ. ಠಾಣೆ ಬಾಗಿಲಿಗೆ ಬುದಗುಂಬಳಕಾಯಿ ಒಡೆದು ಅರಿಶಿನ ಕುಂಕುಮ ಹಚ್ಚಿ ಪೂಜೆ ಸಲ್ಲಿಸಿದ್ದಾರೆ. ಕಳೆದ ಒಂದೂವರೆ ತಿಂಗಳಲ್ಲಿ ಈ ಠಾಣೆಯಲ್ಲಿ ಕೊಲೆ ಸುಲಿಗೆ, ದರೋಡೆ, ಕಳ್ಳತನ ಸೇರಿದಂತೆ ಸುಮಾರು 45ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಕಳೆದ ವಾರ ಮಹಿಳೆಯೊಬ್ಬಳ ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ ಅಮಾನವೀಯ ಘಟನೆ ನಡೆದಿತ್ತು. ಇದೇ ಠಾಣಾ ವ್ಯಾಪ್ತಿಯಲ್ಲಿ ಪ್ರೀತಿಗಾಗಿ ಗುಂಡಿನ ಸದ್ದು ಕೇಳಿ ಬಂದಿತ್ತು. ಈ ಎಲ್ಲ ಪ್ರಕರಣಗಳು ಇದೇ ಠಾಣೆಯಲ್ಲಿ ದಾಖಲಾಗಿವೆ. ಹೀಗಾಗಿ, ಅಪರಾಧ ನಿಯಂತ್ರಿಸಲು ಸಾಕಷ್ಟು ಪ್ರಯತ್ನ ಮಾಡಿದರೂ ಪ್ರಯೋಜನ ಆಗದ ಹಿನ್ನೆಲೆಯಲ್ಲಿ ಪೊಲೀಸರು ದೇವರ ಮೊರೆ ಹೋಗಿದ್ದಾರೆ.
Follow Us
Latest Videos
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ

