ಸರ್ಕಾರದ ಇಂಧನ ಖರ್ಚಾಗುವುದು ಬೇಡ ಅಂತ ಅರೆಸ್ಟ್ ಆಗಲು ನಾವೇ ಠಾಣೆಗೆ ಬಂದಿದ್ದೇವೆ: ಗಿರೀಶ್ ಮಟ್ಟಣ್ಣನವರ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 22, 2025 | 2:53 PM

ಭೀಮ ಸುಳ್ಳು ಹೇಳುತ್ತಿದ್ದಾನೆ, ಹಾಗಾಗೇ ಮಹೇಶ್ ತಿಮರೋಡಿಯನ್ನು ಬಂಧಿಸಲಾಗಿದೆ ಎಂಬ ಒಂದು ಸುಳ್ಳು ನೆರೇಟಿವನ್ನು ಸೃಷ್ಟಿಸಲಾಗುತ್ತಿದೆ, ತಿಮರೋಡಿಯವರನ್ನು ಬಂಧಿಸಲು ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ, ಕೊಟ್ಟ ನೋಟೀಸ್​ಗೆ ಉತ್ತರ ನೀಡುವ ಅವಕಾಶವನ್ನೂ ನಮಗೆ ನೀಡಿಲ್ಲ, ದಿಢೀರನೆ ಮನೆಯ ಮೇಲೆ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಗಿರೀಶ್ ಮಟ್ಟಣ್ಣನವರ್ ಹೇಳಿದರು.

ಮಂಗಳೂರು, ಆಗಸ್ಟ್ 22: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗಿರೀಶ್ ಮಟ್ಟಣ್ಣನವರ್, ನಿನ್ನೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಅರೆಸ್ಟ್ ಮಾಡಲು ಪೊಲೀಸರು ಅವರ ಮನೆವರೆಗೆ ಹೋಗುವ ಅವಶ್ಯಕತೆ ಇರಲಿಲ್ಲ, ನಮಗೆ ಜಾರಿಗೊಳಿಸಿದ್ದ ನೋಟೀಸಿಗೆ ಉತ್ತರ ಕೊಡಲೆಂದು ನಾವೆಲ್ಲ ಸೇರಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಹೋಗುವ ಸಿದ್ಧತೆಯಲ್ಲಿದ್ದಾಗಲೇ ಎರಡು ಜಿಲ್ಲೆಗಳ ಸುಮಾರು 100 ಕ್ಕೂ ಹೆಚ್ಚು ಪೊಲೀಸರು ಬಂದು ತಿಮರೋಡಿಯನ್ನು ಅರೆಸ್ಟ್ ಮಾಡಿದ್ದಾರೆ ಎಂದು ಹೇಳಿದರು. ಈಗ ಹರಿದಾಡುತ್ತಿರುವ ಸುದ್ದಿಯೇನೆಂದರೆ ಜಯಂತ್, ತಾನು ಮತ್ತು ಇತರ 30 ಜನರ ವಿರುದ್ಧ ಎಫ್ಐಅರ್ ದಾಖಲಾಗಿದೆ, ಪೊಲೀಸರು ತಮ್ಮನ್ನು ಅರೆಸ್ಟ್ ಮಾಡೋದಾದರೆ ಮಾಡಲಿ, ತೊಂದರೆ ಇಲ್ಲ, ತಮ್ಮೊಂದಿಗೆ ತಿಮರೋಡಿ ಅವರ ಸಹೋದರ ಮತ್ತು ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳಿದ್ದಾರೆ, ಇನ್ ಫ್ಯಾಕ್ಟ್ ಪೊಲೀಸರಿಗೆ ತೊಂದರೆ ಬೇಡ, ಸರ್ಕಾರದ ಪೆಟ್ರೋಲ್, ಡೀಸೆಲ್ ಖರ್ಚಾಗೋದು ಬೇಡ ಅಂತ ನಾವೇ ಪೊಲೀಸ್ ಸ್ಟೇಷನ್​ಗೆ ಬಂದಿದ್ದೇವೆ ಎಂದು ಮಟ್ಟಣ್ಣನವರ್ ಹೇಳಿದರು.

ಇದನ್ನೂ ಓದಿ:  ತಿಮರೋಡಿನ ಒದ್ದು ಒಳಗೆ ಹಾಕಿಸಿದ್ದೇವೆ: ಡಿಕೆ ಶಿವಕುಮಾರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.