Last Friday of Ashadha: ಇಂದು ಆಷಾಢ ಮಾಸದ ಕೊನೆ ಶುಕ್ರವಾರ, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ, ಬೆಟ್ಟದಲ್ಲಿ ಭಕ್ತಸಾಗರ

ಅರುಣ್​ ಕುಮಾರ್​ ಬೆಳ್ಳಿ

Updated on: Jul 14, 2023 | 10:39 AM

65 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರು ರೂ.50 ಟಿಕೆಟ್ ಖರೀದಿಸಿ ಚಾಮುಂಡೇಶ್ವರಿಯ ದರ್ಶನ ಪಡೆದುಕೊಳ್ಳಬಹುದಾಗಿದೆ.

ಮೈಸೂರು: ತಾಯಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ (Chamundeshwari temple) ಭಕ್ತಸಾಗರ. ಬೆಳಗಿನ ಜಾವ 5 ಗಂಟೆಯಿಂದಲೇ ಜನ ಚಾಮುಂಡಿ ಬೆಟ್ಟಕ್ಕೆ (Chamundi hill) ಬರುತ್ತಿದ್ದಾರೆ. ಚಾಮುಂಡಿ ತಾಯಿಯ ಸನ್ನಿಧಾನಕ್ಕೆ ಪ್ರತಿದಿನ ಭಕ್ತರು ಬಂದು ಪೂಜೆ ಸಲ್ಲಿಸುತ್ತಾರೆ, ಆದರೆ ಇವತ್ತು ವಿಶೇಷ ದಿನವಾಗಿರುವುದರಿಂದ ಭಕ್ತರ ಸಂಖ್ಯೆ ಅಪರಿಮಿತವಾಗಿದೆ. ಹೌದು, ಇದು ಆಷಾಢ ಮಾಸದ ಕೊನೆಯ ಶುಕ್ರವಾರವಾಗಿದ್ದು (last Friday) ಭಕ್ತಾದಿಗಳಿಗೆ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿಯ ಏರ್ಪಾಟು ಮಾಡಲಾಗಿದೆ. ಜನರನ್ನು ನಿಯಂತ್ರಿಸಲು ಪೊಲೀಸರು ಮತ್ತು ಮಹಿಳಾ ಪೊಲೀಸರು ಸಾಹಸ ಪಡುತ್ತಿದ್ದಾರೆ. ನೂಕುನುಗ್ಗಲನ್ನು ಹತೋಟಿಯಲ್ಲಿಡಲು ದೇವಸ್ಥಾನದ ವ್ಯವಸ್ಥಾಪಕ ಮಂಡಳಿ ದರ್ಶನಕ್ಕೆ ರೂ. 300 ಹಾಗೂ ರೂ. 50 ನಿಗದಿಪಡಿಸಿ ವಿಶೇಷ ವ್ಯವಸ್ಥೆಯನ್ನೂ ಕಲ್ಪಿಸಿದೆ. 65 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರು ರೂ.50 ಟಿಕೆಟ್ ಖರೀದಿಸಿ ಚಾಮುಂಡೇಶ್ವರಿಯ ದರ್ಶನ ಪಡೆದುಕೊಳ್ಳಬಹುದಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.