AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ

ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ

ಗಣಪತಿ ಶರ್ಮಾ
|

Updated on: Sep 02, 2026 | 6:24 AM

Share

ಡಾ. ಬಸವರಾಜ ಗುರೂಜಿ ಅವರು 2026ರ ಸೆಪ್ಟೆಂಬರ್ 2ರ ದೈನಂದಿನ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಬುಧವಾರದ ಈ ದಿನ ಶುಕ್ರ ಗ್ರಹ ಕನ್ಯಾ ರಾಶಿಯಿಂದ ತುಲಾ ರಾಶಿಗೆ ಸಂಚರಿಸಲಿದ್ದು, ಚಂದ್ರ ಮೇಷ ರಾಶಿಯ ಭರಣಿ ನಕ್ಷತ್ರದಲ್ಲಿದ್ದಾನೆ. ಪ್ರತಿ ರಾಶಿಯವರಿಗೆ ಆರ್ಥಿಕ, ಆರೋಗ್ಯ, ವೃತ್ತಿ ಮತ್ತು ಕೌಟುಂಬಿಕ ವಿಷಯಗಳಲ್ಲಿನ ಶುಭ ಅಶುಭ ಫಲಗಳನ್ನು ವಿವರವಾಗಿ ತಿಳಿಸಲಾಗಿದೆ.

ಇಂದು 2026ರ ಸೆಪ್ಟೆಂಬರ್ 2, ಬುಧವಾರ, ಪರಾಭವನಾಮ ಸಂವತ್ಸರ, ದಕ್ಷಿಣಾಯಣ, ಶ್ರಾವಣ ಮಾಸ, ಕೃಷ್ಣ ಪಕ್ಷ, ಷಷ್ಠಿ ತಿಥಿ, ಭರಣಿ ನಕ್ಷತ್ರ, ಧ್ರುವ ಯೋಗ ಮತ್ತು ಗರಜ ಕರಣ ಇರಲಿದೆ. ಇಂದು (ಸೆಪ್ಟೆಂಬರ್ 2) ಮಧ್ಯಾಹ್ನ 1 ಗಂಟೆ 51 ನಿಮಿಷಕ್ಕೆ ಶುಕ್ರ ಗ್ರಹ ಕನ್ಯಾ ರಾಶಿಯಿಂದ ತನ್ನ ಸ್ವಕ್ಷೇತ್ರವಾದ ತುಲಾ ರಾಶಿಗೆ ಪ್ರವೇಶ ಮಾಡಲಿದೆ. ಸೂರ್ಯನು ಸಿಂಹ ರಾಶಿಯಲ್ಲಿದ್ದು, ಚಂದ್ರನು ಮೇಷ ರಾಶಿಯ ಭರಣಿ ನಕ್ಷತ್ರದಲ್ಲಿ ಸಂಚಾರ ಮಾಡಲಿದ್ದಾನೆ. ಬುಧವಾರವು ವಿಷ್ಣು, ವಿನಾಯಕ ಮತ್ತು ಕಾಲಭೈರವನಿಗೆ ಪ್ರಿಯವಾದ ದಿನವಾಗಿದೆ. ಇಂದು ವಿಶ್ವ ತೆಂಗಿನಕಾಯಿ ದಿನ ಕೂಡ ಹೌದು. ಈ ದಿನದ ರಾಹುಕಾಲವು ಮಧ್ಯಾಹ್ನ 12 ಗಂಟೆ 19 ನಿಮಿಷದಿಂದ 1 ಗಂಟೆ 54 ನಿಮಿಷದ ತನಕ ಇರಲಿದ್ದು, ಸಂಕಲ್ಪ ಕಾಲ ಅಥವಾ ಶುಭ ಕಾಲ ಮಧ್ಯಾಹ್ನ 4 ಗಂಟೆ 57 ನಿಮಿಷದಿಂದ 6 ಗಂಟೆ 30 ನಿಮಿಷದ ತನಕ ಇರುತ್ತದೆ. ಇಂದಿನ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

Follow Us