Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣಕ್ಕೆ ಎನ್​ಡಿಎ ಅಭ್ಯರ್ಥಿ ಯಾರು ಅಂತ ನಾಳೆ ಗೊತ್ತಾಗಲಿದೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣಕ್ಕೆ ಎನ್​ಡಿಎ ಅಭ್ಯರ್ಥಿ ಯಾರು ಅಂತ ನಾಳೆ ಗೊತ್ತಾಗಲಿದೆ: ನಿಖಿಲ್ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Oct 18, 2024 | 5:15 PM

ಚನ್ನಪಟ್ಟಣದ ಜೊತೆ ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆಯಲಿದ್ದು ಎನ್​ಡಿಎ ಮೈತ್ರಿಕೂಟದ ಪಕ್ಷಗಳ ನಡುವೆ ಸಮನ್ವಯತೆಯ ಭಾಗವಾಗಿ ಎರಡೂ ಕ್ಷೇತ್ರಗಳ ಜೆಡಿಎಸ್ ಮುಖಂಡರ ಜೊತೆ ಚರ್ಚಿಸಲು ತಾನು ನಾಳೆ ಹೋಗುತ್ತಿರುವುದಾಗಿ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮಂಡ್ಯ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ನಿಖಿಲ್ ಕುಮಾರಸ್ವಾಮಿ ಟೋನ್ ಡೌನ್ ಆದ್ರಾ? ಅವರ ಮಾತುಗಳು ಅಂಥ ಅನುಮಾನ ಮೂಡಿಸುತ್ತವೆ. ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ನಿಖಿಲ್, ನಾಳೆ ಬಿಜೆಪಿಯ ಉನ್ನತ ನಾಯಕರು, ರಾಜ್ಯ ನಾಯಕರಾದ ಬಿಎಸ್ ಯಡಿಯೂರಪ್ಪ ಮತ್ತು ಬಿವೈ ವಿಜಯೇಂದ್ರ ಜೊತೆ ಹೆಚ್ ಡಿ ಕುಮಾರಸ್ವಾಮಿಯವರು ಚರ್ಚೆ ನಡೆಸಿ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೈಸೂರು: ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ