AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಾರ್ಟ್ ಸಿಟಿ ಶಿವಮೊಗ್ಗದ ಅಶ್ವಥ್ ನಗರದಲ್ಲಿ ಕೃತಕ ಜಲಪಾತವೊಂದನ್ನು ಸೃಷ್ಟಿಸಿದ ಚರಂಡಿ!

ಸ್ಮಾರ್ಟ್ ಸಿಟಿ ಶಿವಮೊಗ್ಗದ ಅಶ್ವಥ್ ನಗರದಲ್ಲಿ ಕೃತಕ ಜಲಪಾತವೊಂದನ್ನು ಸೃಷ್ಟಿಸಿದ ಚರಂಡಿ!

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 16, 2024 | 7:11 PM

Share

ರಾಜ್ಯದ 6 ಸ್ಮಾರ್ಟ್ ಸಿಟಿ ಯೋಜನೆಯ ಆರು ನಗರಗಳಲ್ಲಿ ಶಿವಮೊಗ್ಗ ಕೂಡ ಒಂದು. ಉಳಿದ ಐದು; ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ದಾವಣಗೆರೆ, ತುಮಕೂರು ಮತ್ತು ಮಂಗಳೂರು. ವಿಷಾದಕರ ಸಂಗತಿಯೆಂದರೆ ಇವುಗಳಲ್ಲಿ ಯಾವ ನಗರವೂ ಸ್ಮಾರ್ಟ್ ಸಿಟಿಯಾಗಿ ರೂಪುಗೊಂಡಿಲ್ಲ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿರುವ ಜೋಗ ಜಲಪಾತ ವಿಶ್ವಪ್ರಸಿದ್ಧ. ಮಳೆಗಾಲದ ಸಮಯದಲ್ಲಿ ಅದನ್ನು ನೋಡಲು ಅಸಂಖ್ಯಾತ ಪ್ರವಾಸಿಗರು ದೇಶವಿದೇಶಗಳಿಂದ ಬರುತ್ತಾರೆ. ಅದರೆ ಶಿವಮೊಗ್ಗ ನಗರದ ಆಶ್ವಥ್ ನಗರದಲ್ಲಿರುವ ಈ ಜಲಪಾತದ ಬಗ್ಗೆ ನಗರದ ನಿವಾಸಿಗಳಿಗೂ ಗೊತ್ತಿರಲಿಕ್ಕಿಲ್ಲ. ಅಂದಹಾಗೆ, ಇದೊಂದು ಫೇಕ್ ಜಲಪಾತ ಮಾರಾಯ್ರೇ. ಅಸಲಿಗೆ ಶಿವಮೊಗ್ಗದಲ್ಲಿ ಜೋರಾಗಿ ಮಳೆ ಸುರಿದಿರುವುದರಿಂದ ಅಶ್ವಥ್ ನಗರದಲ್ಲಿರುವ ಗಾರೆ ಕಾಲುವೆ ತುಂಬಿ ಹರಿಯುತ್ತಿದ್ದು ಜಲಪಾತದಂಥ ಚಿತ್ರಣ ಮೂಡಿದೆ. ರಾಜ್ಯದ 6 ಸ್ಮಾರ್ಟ್ ಸಿಟಿ ಯೋಜನೆಯ ಆರು ನಗರಗಳಲ್ಲಿ ಶಿವಮೊಗ್ಗ ಕೂಡ ಒಂದು. ಉಳಿದ ಐದು; ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ದಾವಣಗೆರೆ, ತುಮಕೂರು ಮತ್ತು ಮಂಗಳೂರು. ವಿಷಾದಕರ ಸಂಗತಿಯೆಂದರೆ ಇವುಗಳಲ್ಲಿ ಯಾವ ನಗರವೂ ಸ್ಮಾರ್ಟ್ ಸಿಟಿಯಾಗಿ ರೂಪುಗೊಂಡಿಲ್ಲ. ಶಿವಮೊಗ್ಗದ ಈ ರಸ್ತೆಯನ್ನು ನೋಡಿ. ವಾಹನಗಳ ಅರ್ಧಚಕ್ರ ಮುಳುಗುವಷ್ಟು ಚರಂಡಿ ನೀರು ರಸ್ತೆಯ ಮೇಲಿದೆ. ಶಿವಮೊಗ್ಗದ ಸಂಸದ ಬಿವೈ ರಾಘವೇಂದ್ರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತಾನೊಬ್ಬ ಅಭಿವೃದ್ಧಿ ಹರಿಕಾರನೆಂಬಂತೆ ಮಾತಾಡಿದ್ದರು, ಜನರ ಕಣ್ಣಿಗೆ ಕಾಣಿಸುತ್ತಿರೋದೆ ಬೇರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Bengaluru Rains: ವಿಧಾನ ಸೌಧ, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ ಸೇರಿದಂತೆ ಹಲವೆಡೆ ಭಾರೀ ಮಳೆ